‘ಕರ್ನಾಟಕ ಪೌರಾಡಳಿತ ಕಾಯ್ದೆ–1976 ಕಲಂ 288 (2)ರ ಪ್ರಕಾರ ಧಾರ್ಮಿಕ ಕಾರ್ಯಕ್ರಮಗಳಿಗೆ ರಸ್ತೆಗಳಲ್ಲಿ ತಾತ್ಕಾಲಿಕ ಪೆಂಡಾಲ್ ಹಾಕಲು ಬಿಬಿಎಂಪಿ ಅನುಮತಿ ನೀಡಬಹುದು. ಆದರೆ, ಪರವಾನಗಿ ನೀಡುವ ಮೊದಲು ಆಯುಕ್ತರು ಖುದ್ದು ಸ್ಥಳ ಪರಿಶೀಲನೆ ನಡೆಸಬೇಕು ಮತ್ತು ಸಂಚಾರಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.