ವಿಜಯನಗರದ ಸುತ್ತಮುತ್ತ ಸಾಕಷ್ಟು ಅಭಿವೃದ್ಧಿ ಆಗಿದೆ. ರಸ್ತೆ, ನೀರು, ಒಳಚರಂಡಿ ವ್ಯವಸ್ಥೆ ಉತ್ತಮಗೊಂಡಿದೆ. ಶಾಲಾ ಕಾಲೇಜುಗಳಿಗೆ ಬೇಕಾಗುವ ಮೈದಾನ ಅಭಿವೃದ್ಧಿ ಪಡಿಸಿರುವುದು ಇಲ್ಲಿಯ ಶಾಸಕರ ಹೆಗ್ಗಳಿಕೆ. ಆದರೆ, ಇಲ್ಲಿಯ ಸಮಸ್ಯೆ ಎಂದರೆ ಸರ್ಕಾರದಿಂದ ಸಿಗುತ್ತಿರುವ ಯಾವ ಸೌಕರ್ಯಗಳೂ ಜನರಿಗೆ ಸರಿಯಾಗಿ ಹಂಚಿಕೆ ಆಗುತ್ತಿಲ್ಲ. ಆ ಬಗ್ಗೆ ಹೆಚ್ಚಿನ ಗಮನ ಕೊಡಬೇಕು.