ಬೆಂಗಳೂರು: ‘ಆವತ್ತೇ ನನ್ನ ಮಾತು ಕೇಳಿದ್ದರೆ ಮುಂಬೈನಲ್ಲಿ ಬಾಂಬ್ ಸ್ಫೋಟ ಸಂಭವಿಸುತ್ತಿರಲಿಲ್ಲ. ಸಾವು ನೋವು ಜರಗುತ್ತಿರಲಿಲ್ಲ. ಹಾಗಾಗಿ ಮಹಾರಾಷ್ಟ್ರ ಗೃಹ ಇಲಾಖೆ ಮತ್ತು ರಾಜಭವನದ ಅಧಿಕಾರಿಗಳ ವಿರುದ್ದ ತನಿಖೆಗೆ ನಿರ್ದೇಶಿಸಬೇಕು’ ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ಅರ್ಜಿದಾರರಿಗೆ ಹೈಕೋರ್ಟ್ ₹5 ಸಾವಿರ ದಂಡ ವಿಧಿಸಿದೆ.