‘ಲೋಕಾಯಕ್ತರು ಈ ಪ್ರಕರಣದ ಸೂಕ್ತ ತನಿಖೆ ನಡೆಸಿಲ್ಲ ಮತ್ತು ವಾಸ್ತವಾಂಶವನ್ನು ಕಲೆಹಾಕಿಲ್ಲ. ಜೊತೆಗೆ, ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಲು 1988ರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಅಡಿಯಲ್ಲಿ ಸಚಿವ ಸಂಪುಟದ ಪೂರ್ವಾನುಮತಿ ಕಡ್ಡಾಯ. ಆದರೆ, ಈ ಅನುಮತಿ ಪಡೆದಿಲ್ಲ. ಲೋಕೋಪಯೋಗಿ ಇಲಾಖೆ ಸಚಿವರ ಅನುಮತಿಯನ್ನಷ್ಟೇ ಪಡೆಯಲಾಗಿದೆ. ಇದು ಕಾನೂನುಬದ್ಧವಾಗಿಲ್ಲ. ಪೂರ್ವಾನುಮತಿ ನೀಡುವಲ್ಲಿ ರಾಜ್ಯ ಸರ್ಕಾರ ಮಲತಾಯಿ ಧೋರಣೆ ತೋರಿದೆ’ ಎಂದು ಪೇಶ್ವೆ ಪರ ವಕೀಲರು ವಾದ ಮಂಡಿಸಿದ್ದರು. ಇದನ್ನು ಕೋರ್ಟ್ ಮಾನ್ಯ ಮಾಡಿದೆ.