ಪ್ರಕರಣವೇನು?: ‘ವಿಜಯಪುರ ಜಿಲ್ಲೆ ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್ಡಿಇ ಸಂಸ್ಥೆಯ ಲೆಟರ್ ಹೆಡ್ನಲ್ಲಿ ಬರೆದಿದ್ದರು ಎನ್ನಲಾದ ಪತ್ರವನ್ನು ಶಾರದಾ ಡೈಮಂಡ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಆದರೆ, ಇದು ಬಿಎಲ್ಡಿಇ ಶಿಕ್ಷಣ ಸಂಸ್ಥೆಯ ನಕಲಿ ಲೆಟರ್ ಹೆಡ್ ಮತ್ತು ಸಚಿವರ ಸಹಿ ನಕಲು ಮಾಡಿದ ಪತ್ರವಾಗಿದೆ. ಎಂ.ಬಿ. ಪಾಟೀಲರ ತೇಜೋವಧೆ ಮಾಡುವ ಉದ್ದೇಶದಿಂದ ಹೊಂದಿದೆ’ ಎಂದು ಆರೋಪಿಸಿ ಜೆ.ಶರವಣ, 2019ರ ಏಪ್ರಿಲ್ 25ರಂದು ಶ್ರೀರಾಂಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.