‘ಕೈಗಾರಿಕಾ ಉದ್ಯೋಗ ಕಾಯ್ದೆ ಪ್ರಕಾರಯಾವುದೇ ನಿಯಮ ರೂಪಿಸುವಾಗ ಅಥವಾ ತಿದ್ದುಪಡಿ ತರುವಾಗ ಕಾರ್ಮಿಕಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿಲ್ಲ. ಕಾಯಂ ನೌಕರರು ಮತ್ತು ಗುತ್ತಿಗೆ ಆಧಾರದ ನೌಕರರಿಗೆ ಇರುವ ಸೌಲಭ್ಯಗಳಲ್ಲಿ ವ್ಯತ್ಯಾಸವಿದೆ’ ಎಂದು ಕರ್ನಾಟಕ ಕೈಗಾರಿಕೆ ಮತ್ತು ಇತರ ಉದ್ಯಮಗಳ ನೌಕರರ ಒಕ್ಕೂಟ ಅರ್ಜಿ ಸಲ್ಲಿಸಿತ್ತು.