ಬಸವನಗುಡಿ ಪೊಲೀಸ್ ಠಾಣೆಯಲ್ಲಿ2018ರ ಮೇ 16ರಂದು ಫಿರ್ಯಾದು ದಾಖಲಿಸಿದ್ದ ಮಹಿಳೆ,‘ನನ್ನ ತಾಯಿ ಬಸವನಗುಡಿ ಅಂಚೆ ಕಚೇರಿಯಲ್ಲಿ ಗುತ್ತಿಗೆ ಉದ್ಯೋಗಿಯಾಗಿದ್ದರು. ಅವರು ಅನಾರೋಗ್ಯಕ್ಕೆ ಈಡಾಗಿದ್ದ ಸಂದರ್ಭದಲ್ಲಿ ನಾನೇ ಅಂಚೆ ಕಚೇರಿಗೆ ಹೋಗಿ ಕೆಲಸ ಮಾಡುತ್ತಿದ್ದೆ. ಈ ಸಂದರ್ಭದಲ್ಲಿ ರಾಧಾಕೃಷ್ಣ ಮತ್ತು ಹನುಮಂತಯ್ಯ, ಸರಿಯಾಗಿ ಕೆಲಸ ಮಾಡಬೇಕು. ಇಲ್ಲವಾ ದರೆ ತೆಗೆದು ಹಾಕುತ್ತೇನೆ ಎಂಬ ಬೆದರಿಕೆ ಹಾಕುತ್ತಿದ್ದರು’ ಎಂದು ದೂರು ನೀಡಿದ್ದರು.