<p><strong>ಬೆಂಗಳೂರು:</strong> ‘ಸಾಮಾಜಿಕ ಸೇವಾ ಉದ್ದೇಶಕ್ಕಾಗಿ ಸರ್ಕಾರದಿಂದ ಪಡೆದ 22 ಎಕರೆ ಜಮೀನಿನಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಹಣ ಗಳಿಸಲಾಗುತ್ತಿದೆ’ ಎಂದು ಆಕ್ಷೇಪಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಮಾತಾ ಅಮೃತಾನಂದಮಯಿ ಟ್ರಸ್ಟ್ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ವರ್ತೂರು ಹೋಬಳಿ ಕಸವನಹಳ್ಳಿಯ ಬೋವಿ ಕಾಲೋನಿ ನಿವಾಸಿಗಳಾದ ಕವಿತಾ ಸೇರಿದಂತೆ ಐವರು ಸಲ್ಲಿಸಿ<br />ರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ಪ್ರತಿವಾದಿಗಳಾದ ಬೆಂಗಳೂರು ನಗರ ಶಾಖೆಯ ಮಾತಾ ಅಮೃತಾನಂದಮಯಿ ಟ್ರಸ್ಟ್, ಕಂದಾಯ ಇಲಾಖೆ, ನಗರ ಜಿಲ್ಲಾಧಿಕಾರಿ,ವಿಶೇಷ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ಕೆ.ಆರ್.ಪುರಂ ಪೂರ್ವ ತಾಲೂಕು ತಹಶೀಲ್ದಾರ್ ಅವರಿಗೂ ನೋಟಿಸ್ ಜಾರಿಗೆ ಆದೇಶಿಸಲಾಗಿದೆ.</p>.<p class="Subhead">ಆಕ್ಷೇಪಣೆ ಏನು?: ‘ಬಡ ವಿಧವೆಯರಿಗೆ 2 ಸಾವಿರ ಉಚಿತ ಮನೆ ಕಟ್ಟಲು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ದೇವಸ್ಥಾನ, ಬ್ರಹ್ಮಸ್ಥಾನ, ಆಶ್ರಮ, ಅನಾಥ ಮಕ್ಕಳಿಗೆ ಶಾಲೆ, ಉಚಿತ ವೈದ್ಯಕೀಯ ಕೇಂದ್ರ ಸ್ಥಾಪಿಸುವುದಾಗಿ ಮಾತಾ ಅಮೃತಾನಂದಮಯಿ ಟ್ರಸ್ಟ್ ಸರ್ಕಾರದಿಂದ 22 ಎಕರೆ ಜಮೀನು ಪಡೆದಿದೆ. ಆದರೆ, ಈ ಜಾಗದಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಷರತ್ತುಗಳನ್ನು ಉಲ್ಲಂಘಿಸಿದೆ. ಟ್ರಸ್ಟ್ ಹಣ ಗಳಿಕೆಯಲ್ಲಿ ತೊಡಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾಮಾಜಿಕ ಸೇವಾ ಉದ್ದೇಶಕ್ಕಾಗಿ ಸರ್ಕಾರದಿಂದ ಪಡೆದ 22 ಎಕರೆ ಜಮೀನಿನಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಹಣ ಗಳಿಸಲಾಗುತ್ತಿದೆ’ ಎಂದು ಆಕ್ಷೇಪಿಸಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಮಾತಾ ಅಮೃತಾನಂದಮಯಿ ಟ್ರಸ್ಟ್ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ವರ್ತೂರು ಹೋಬಳಿ ಕಸವನಹಳ್ಳಿಯ ಬೋವಿ ಕಾಲೋನಿ ನಿವಾಸಿಗಳಾದ ಕವಿತಾ ಸೇರಿದಂತೆ ಐವರು ಸಲ್ಲಿಸಿ<br />ರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ಪ್ರತಿವಾದಿಗಳಾದ ಬೆಂಗಳೂರು ನಗರ ಶಾಖೆಯ ಮಾತಾ ಅಮೃತಾನಂದಮಯಿ ಟ್ರಸ್ಟ್, ಕಂದಾಯ ಇಲಾಖೆ, ನಗರ ಜಿಲ್ಲಾಧಿಕಾರಿ,ವಿಶೇಷ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ಕೆ.ಆರ್.ಪುರಂ ಪೂರ್ವ ತಾಲೂಕು ತಹಶೀಲ್ದಾರ್ ಅವರಿಗೂ ನೋಟಿಸ್ ಜಾರಿಗೆ ಆದೇಶಿಸಲಾಗಿದೆ.</p>.<p class="Subhead">ಆಕ್ಷೇಪಣೆ ಏನು?: ‘ಬಡ ವಿಧವೆಯರಿಗೆ 2 ಸಾವಿರ ಉಚಿತ ಮನೆ ಕಟ್ಟಲು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ದೇವಸ್ಥಾನ, ಬ್ರಹ್ಮಸ್ಥಾನ, ಆಶ್ರಮ, ಅನಾಥ ಮಕ್ಕಳಿಗೆ ಶಾಲೆ, ಉಚಿತ ವೈದ್ಯಕೀಯ ಕೇಂದ್ರ ಸ್ಥಾಪಿಸುವುದಾಗಿ ಮಾತಾ ಅಮೃತಾನಂದಮಯಿ ಟ್ರಸ್ಟ್ ಸರ್ಕಾರದಿಂದ 22 ಎಕರೆ ಜಮೀನು ಪಡೆದಿದೆ. ಆದರೆ, ಈ ಜಾಗದಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಿ ಷರತ್ತುಗಳನ್ನು ಉಲ್ಲಂಘಿಸಿದೆ. ಟ್ರಸ್ಟ್ ಹಣ ಗಳಿಕೆಯಲ್ಲಿ ತೊಡಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>