‘ಲಾಕ್ಡೌನ್ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಇದ್ದ ಕಾರಣ ಕಬ್ಬನ್ ಪಾರ್ಕ್ನಲ್ಲಿ ಗಾಳಿ ಶುದ್ಧವಾಗಿದೆ. ಈ ನಡುವೆ ವಾಹನ ಸಂಚಾರಕ್ಕೆ ಅನುಮತಿ ನೀಡುವಂತೆ ಗೃಹ ಇಲಾಖೆ ಕಾರ್ಯದರ್ಶಿ ಅವರು ರಾಜ್ಯ ಸರ್ಕಾರವನ್ನು ಕೋರಿದ್ದಾರೆ. ಅವಕಾಶ ನಿರಾಕರಿಸಿ ನಗರಾಭಿವೃದ್ಧಿ ಇಲಾಖೆಯ ಶಿಫಾರಸು ಅನುಷ್ಠಾನಗೊಳಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.