<p><strong>ಬೆಂಗಳೂರು: </strong>ಮಹಿಳೆಯನ್ನು ಹಿಂಸಾಚಾರದಿಂದ ರಕ್ಷಿಸುವುದು ಕೌಟುಂಬಿಕ ದೌರ್ಜನ್ಯ(ಡಿ.ವಿ) ಕಾಯ್ದೆಯ ಮುಖ್ಯ ಉದ್ದೇಶವೇ ಹೊರತು ಅಪರಾಧ ಅಥವಾ ಸಿವಿಲ್ ವಿಚಾರಣೆ ನಡೆಸುವುದಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಚಾರಣಾ ನ್ಯಾಯಾಲಯದ ಮುಂದೆ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ವಿಳಂಬದ ಕಾರಣಕ್ಕೆ ವಜಾ ಮಾಡುವಂತೆ ಕೋರಿ ಪತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರಿದ್ದ ಪೀಠ, ‘ಹಿಂಸೆಯಿಂದ ಮಹಿಳೆಯನ್ನು ರಕ್ಞಿಸುವುದಷ್ಟೇ ಈ ಕಾಯ್ದೆಯೆ ಉದ್ದೇಶ’ ಎಂದರು.</p>.<p>‘ಪರಿಹಾರ ಕೋರಿ ಮಹಿಳೆ ಅರ್ಜಿ ಸಲ್ಲಿಸುವುದೇ ಅಪರಾಧ ಅಲ್ಲ. ಇದಕ್ಕೆ ಸಿಆರ್ಪಿಸಿ ಸೆಕ್ಷನ್ 468ರ ಅಡಿಯಲ್ಲಿ ಸಮಯದ ಮಿತಿ ಅನ್ವಯವಾಗುವುದಿಲ್ಲ. ಕುಟುಂಬದಲ್ಲಿ ಸಂಭವಿಸುವ ಯಾವುದೇ ಹಿಂಸಾಚಾರದಿಂದ ಮಹಿಳೆಯನ್ನು ರಕ್ಷಿಸುವುದು ಈ ಕಾಯ್ದೆಯ ಉದ್ದೇಶ’ ಎಂದು ಪೀಠ ಹೇಳಿತು.</p>.<p>‘ಪತ್ನಿ ಪರಿಹಾರ ಪಡೆಯಲು ಅರ್ಹವಾಗಿದ್ದಾರೆ’ ಎಂದು ತಿಳಿಸಿದ ಪೀಠ, ₹4.32 ಲಕ್ಷ ಬಿಡುಗಡೆ ಮಾಡುವಂತೆ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಹಿಳೆಯನ್ನು ಹಿಂಸಾಚಾರದಿಂದ ರಕ್ಷಿಸುವುದು ಕೌಟುಂಬಿಕ ದೌರ್ಜನ್ಯ(ಡಿ.ವಿ) ಕಾಯ್ದೆಯ ಮುಖ್ಯ ಉದ್ದೇಶವೇ ಹೊರತು ಅಪರಾಧ ಅಥವಾ ಸಿವಿಲ್ ವಿಚಾರಣೆ ನಡೆಸುವುದಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಚಾರಣಾ ನ್ಯಾಯಾಲಯದ ಮುಂದೆ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ವಿಳಂಬದ ಕಾರಣಕ್ಕೆ ವಜಾ ಮಾಡುವಂತೆ ಕೋರಿ ಪತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಅವರಿದ್ದ ಪೀಠ, ‘ಹಿಂಸೆಯಿಂದ ಮಹಿಳೆಯನ್ನು ರಕ್ಞಿಸುವುದಷ್ಟೇ ಈ ಕಾಯ್ದೆಯೆ ಉದ್ದೇಶ’ ಎಂದರು.</p>.<p>‘ಪರಿಹಾರ ಕೋರಿ ಮಹಿಳೆ ಅರ್ಜಿ ಸಲ್ಲಿಸುವುದೇ ಅಪರಾಧ ಅಲ್ಲ. ಇದಕ್ಕೆ ಸಿಆರ್ಪಿಸಿ ಸೆಕ್ಷನ್ 468ರ ಅಡಿಯಲ್ಲಿ ಸಮಯದ ಮಿತಿ ಅನ್ವಯವಾಗುವುದಿಲ್ಲ. ಕುಟುಂಬದಲ್ಲಿ ಸಂಭವಿಸುವ ಯಾವುದೇ ಹಿಂಸಾಚಾರದಿಂದ ಮಹಿಳೆಯನ್ನು ರಕ್ಷಿಸುವುದು ಈ ಕಾಯ್ದೆಯ ಉದ್ದೇಶ’ ಎಂದು ಪೀಠ ಹೇಳಿತು.</p>.<p>‘ಪತ್ನಿ ಪರಿಹಾರ ಪಡೆಯಲು ಅರ್ಹವಾಗಿದ್ದಾರೆ’ ಎಂದು ತಿಳಿಸಿದ ಪೀಠ, ₹4.32 ಲಕ್ಷ ಬಿಡುಗಡೆ ಮಾಡುವಂತೆ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>