ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮಾಳದಲ್ಲಿ ಮರಗಿಡ ನಾಶ: ಸರ್ಕಾರಕ್ಕೆ ನೋಟಿಸ್

Last Updated 25 ಸೆಪ್ಟೆಂಬರ್ 2020, 21:54 IST
ಅಕ್ಷರ ಗಾತ್ರ

ಬೆಂಗಳೂರು:ಕೋಲಾರ ಜಿಲ್ಲೆಯ ಗುಂಡೇನಹಳ್ಳಿ ಬೆಟ್ಟದಲ್ಲಿನ 37 ಎಕರೆ ಗೋಮಾಳದಲ್ಲಿ ಈ ಹಿಂದಿನಂತೆ ಗಿಡ ನೆಡಲು ನಿರ್ದೇಶನ ನೀಡಬೇಕು ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

‘ಅಕ್ರಮ ಗಣಿಗಾರಿಕೆ ನಡೆಸಿದವರಿಗೆ ವಿಧಿಸಲಾದ ₹106 ಕೋಟಿ ದಂಡ ವಸೂಲಿ ಮಾಡದೆ ಅವರ ಪರವಾನಗಿಯನ್ನು ಅಧಿಕಾರಿಗಳು ನವೀಕರಿಸಿದ್ದಾರೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ರವೀಂದ್ರಮತ್ತು ಇತರ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿತು.

‘‌45.16 ಎಕರೆ ಸರ್ಕಾರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ. ಅದರಲ್ಲಿಸುಮಾರು 37 ಎಕರೆಯಷ್ಟು ಜಾಗದಲ್ಲಿ ಮರ ಗಿಡಗಳಿದ್ದವು.ಈಗ ಅದು ಸಂಪೂರ್ಣ ನಾಶವಾಗಿದೆ. ಸುಮಾರು 9,500 ಮರಗಳು ನಾಶವಾದ ನಂತರವೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

‘ಸರ್ಕಾರಿ ಭೂಮಿ ಒತ್ತುವರಿ ಮಾಡಿದವರು ಮತ್ತು ಅದಕ್ಕೆ ಅವಕಾಶ ಕಲ್ಪಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ತನಿಖೆಗೆ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT