<p><strong>ಬೆಂಗಳೂರು:</strong>ಕೋಲಾರ ಜಿಲ್ಲೆಯ ಗುಂಡೇನಹಳ್ಳಿ ಬೆಟ್ಟದಲ್ಲಿನ 37 ಎಕರೆ ಗೋಮಾಳದಲ್ಲಿ ಈ ಹಿಂದಿನಂತೆ ಗಿಡ ನೆಡಲು ನಿರ್ದೇಶನ ನೀಡಬೇಕು ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.</p>.<p>‘ಅಕ್ರಮ ಗಣಿಗಾರಿಕೆ ನಡೆಸಿದವರಿಗೆ ವಿಧಿಸಲಾದ ₹106 ಕೋಟಿ ದಂಡ ವಸೂಲಿ ಮಾಡದೆ ಅವರ ಪರವಾನಗಿಯನ್ನು ಅಧಿಕಾರಿಗಳು ನವೀಕರಿಸಿದ್ದಾರೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>ರವೀಂದ್ರಮತ್ತು ಇತರ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿತು.</p>.<p>‘45.16 ಎಕರೆ ಸರ್ಕಾರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ. ಅದರಲ್ಲಿಸುಮಾರು 37 ಎಕರೆಯಷ್ಟು ಜಾಗದಲ್ಲಿ ಮರ ಗಿಡಗಳಿದ್ದವು.ಈಗ ಅದು ಸಂಪೂರ್ಣ ನಾಶವಾಗಿದೆ. ಸುಮಾರು 9,500 ಮರಗಳು ನಾಶವಾದ ನಂತರವೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>‘ಸರ್ಕಾರಿ ಭೂಮಿ ಒತ್ತುವರಿ ಮಾಡಿದವರು ಮತ್ತು ಅದಕ್ಕೆ ಅವಕಾಶ ಕಲ್ಪಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ತನಿಖೆಗೆ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಕೋಲಾರ ಜಿಲ್ಲೆಯ ಗುಂಡೇನಹಳ್ಳಿ ಬೆಟ್ಟದಲ್ಲಿನ 37 ಎಕರೆ ಗೋಮಾಳದಲ್ಲಿ ಈ ಹಿಂದಿನಂತೆ ಗಿಡ ನೆಡಲು ನಿರ್ದೇಶನ ನೀಡಬೇಕು ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.</p>.<p>‘ಅಕ್ರಮ ಗಣಿಗಾರಿಕೆ ನಡೆಸಿದವರಿಗೆ ವಿಧಿಸಲಾದ ₹106 ಕೋಟಿ ದಂಡ ವಸೂಲಿ ಮಾಡದೆ ಅವರ ಪರವಾನಗಿಯನ್ನು ಅಧಿಕಾರಿಗಳು ನವೀಕರಿಸಿದ್ದಾರೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>ರವೀಂದ್ರಮತ್ತು ಇತರ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿತು.</p>.<p>‘45.16 ಎಕರೆ ಸರ್ಕಾರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ. ಅದರಲ್ಲಿಸುಮಾರು 37 ಎಕರೆಯಷ್ಟು ಜಾಗದಲ್ಲಿ ಮರ ಗಿಡಗಳಿದ್ದವು.ಈಗ ಅದು ಸಂಪೂರ್ಣ ನಾಶವಾಗಿದೆ. ಸುಮಾರು 9,500 ಮರಗಳು ನಾಶವಾದ ನಂತರವೂ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>‘ಸರ್ಕಾರಿ ಭೂಮಿ ಒತ್ತುವರಿ ಮಾಡಿದವರು ಮತ್ತು ಅದಕ್ಕೆ ಅವಕಾಶ ಕಲ್ಪಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ತನಿಖೆಗೆ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>