<p><strong>ಬೆಂಗಳೂರು:</strong> ಖಾಲಿ ಇರುವ ಎಲ್ಲ ಅಭಿಯೋಜಕರ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೆಚ್ಚುವರಿ ಹುದ್ದೆಗಳನ್ನು ಸೃಜಿಸುವ ಸಂಬಂಧವೂ ನಿರ್ಧಾರ ತೆಗೆದುಕೊಳ್ಳುವಂತೆ ತಿಳಿಸಿದೆ.</p>.<p>ಈ ಸಂಬಂಧ 2019ರ ಸೆಪ್ಟೆಂಬರ್ನಲ್ಲಿ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಆದೇಶ ನೀಡಿದ್ದರೂ ಹುದ್ದೆಗಳು ಖಾಲಿ ಉಳಿದಿವೆ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘58 ಹಿರಿಯ ಸಹಾಯಕ ಅಭಿಯೋಜಕರ ಹುದ್ದೆಗಳು ಖಾಲಿ ಇವೆ. ಸಹಾಯಕ ಅಭಿಯೋಜಕರ 254 ಹುದ್ದೆಗಳಲ್ಲಿ 205 ಹುದ್ದೆಗಳ ಭರ್ತಿಗೆ ಮಾತ್ರ ಪ್ರಕ್ರಿಯೆ ಆರಂಭಿಸಲಾಗಿದೆ’ ಎಂಬ ವಿವರ ಪರಿಶೀಲಿಸಿದ ಪೀಠ, ‘ವಿಚಾರಣೆಗಳು ವಿಳಂಬ ಆಗುವುದನ್ನು ತಪ್ಪಿಸಲು ಈ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ತಿಳಿಸಿತು.</p>.<p>‘ವಿಚಾರಣೆ ವಿಳಂಬದ ಜತೆಗೆ ಆರೋಪಿಗಳ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗಲಿದೆ. ಅದು ಸರಿಯಾದ ಕ್ರಮವಲ್ಲ. ಖಾಲಿ ಹುದ್ದೆ ಭರ್ತಿ ಮಾಡುವ ಜೊತೆಗೆ ಹೆಚ್ಚುವರಿ ಹುದ್ದೆಗಳನ್ನು ಸೃಜಿಸುವ ಸಂಬಂಧ ಅನುಸರಣಾ ವರದಿ ಸಲ್ಲಿಸಬೇಕು’ ಎಂದು ಪೀಠ ನಿರ್ದೇಶನ ನೀಡಿತು. ವಿಚಾರಣೆಯನ್ನು ಆ.27ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಖಾಲಿ ಇರುವ ಎಲ್ಲ ಅಭಿಯೋಜಕರ ಹುದ್ದೆಗಳನ್ನು ಭರ್ತಿ ಮಾಡಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೆಚ್ಚುವರಿ ಹುದ್ದೆಗಳನ್ನು ಸೃಜಿಸುವ ಸಂಬಂಧವೂ ನಿರ್ಧಾರ ತೆಗೆದುಕೊಳ್ಳುವಂತೆ ತಿಳಿಸಿದೆ.</p>.<p>ಈ ಸಂಬಂಧ 2019ರ ಸೆಪ್ಟೆಂಬರ್ನಲ್ಲಿ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಆದೇಶ ನೀಡಿದ್ದರೂ ಹುದ್ದೆಗಳು ಖಾಲಿ ಉಳಿದಿವೆ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>‘58 ಹಿರಿಯ ಸಹಾಯಕ ಅಭಿಯೋಜಕರ ಹುದ್ದೆಗಳು ಖಾಲಿ ಇವೆ. ಸಹಾಯಕ ಅಭಿಯೋಜಕರ 254 ಹುದ್ದೆಗಳಲ್ಲಿ 205 ಹುದ್ದೆಗಳ ಭರ್ತಿಗೆ ಮಾತ್ರ ಪ್ರಕ್ರಿಯೆ ಆರಂಭಿಸಲಾಗಿದೆ’ ಎಂಬ ವಿವರ ಪರಿಶೀಲಿಸಿದ ಪೀಠ, ‘ವಿಚಾರಣೆಗಳು ವಿಳಂಬ ಆಗುವುದನ್ನು ತಪ್ಪಿಸಲು ಈ ಹುದ್ದೆಗಳನ್ನು ಭರ್ತಿ ಮಾಡಬೇಕು’ ಎಂದು ತಿಳಿಸಿತು.</p>.<p>‘ವಿಚಾರಣೆ ವಿಳಂಬದ ಜತೆಗೆ ಆರೋಪಿಗಳ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ ಆಗಲಿದೆ. ಅದು ಸರಿಯಾದ ಕ್ರಮವಲ್ಲ. ಖಾಲಿ ಹುದ್ದೆ ಭರ್ತಿ ಮಾಡುವ ಜೊತೆಗೆ ಹೆಚ್ಚುವರಿ ಹುದ್ದೆಗಳನ್ನು ಸೃಜಿಸುವ ಸಂಬಂಧ ಅನುಸರಣಾ ವರದಿ ಸಲ್ಲಿಸಬೇಕು’ ಎಂದು ಪೀಠ ನಿರ್ದೇಶನ ನೀಡಿತು. ವಿಚಾರಣೆಯನ್ನು ಆ.27ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>