<p><strong>ಬೆಂಗಳೂರು:</strong> ಮಾಗಡಿ ರಸ್ತೆಗೆ ಹೊಂದಿಕೊಂಡಂತೆ ಇರುವ 354 ಎಕರೆ 10 ಗುಂಟೆ ಜಾಗವನ್ನು ಜಮ್ನಾಲಾಲ್ ಬಜಾಜ್ಟ್ರಸ್ಟ್ಗೆ ಮರಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.</p>.<p>‘ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ ನಿಬಂಧನೆಗಳನ್ನು ಮೀರಿ ಹೆಚ್ಚುವರಿ ಭೂಮಿಯನ್ನು ಈ ಟ್ರಸ್ಟ್ ಹೊಂದಿದೆ’ ಎಂದು ಭೂ ನ್ಯಾಯಮಂಡಳಿ (ಬೆಂಗಳೂರು ಉತ್ತರ) ತೀರ್ಪು ನೀಡಿತ್ತು.</p>.<p>ಇದನ್ನು ಪ್ರಶ್ನಿಸಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ಕುಮಾರ್ ಅವರಿದ್ದ ಪೀಠ, ನ್ಯಾಯಮಂಡಳಿಯ ಈ ನಿಲುವಿಗೆ ಅತೃಪ್ತಿ ವ್ಯಕ್ತಪಡಿಸಿದೆ.</p>.<p>ನ್ಯಾಯ ಮಂಡಳಿಯ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿ ಮೌಲ್ಯಮಾಪನ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪೀಠ ಸೂಚನೆ ನೀಡಿದೆ. ಅಲ್ಲದೇ, ಕೈಗೊಂಡ ಕ್ರಮಗಳ ಬಗ್ಗೆ ಮೂರು ತಿಂಗಳಲ್ಲಿ ವರದಿ ಮಂಡಿಸುವಂತೆ ನಿರ್ದೇಶನ ನೀಡಿದೆ.</p>.<p>ಭೂ ನ್ಯಾಯ ಮಂಡಳಿಯು ಮೂರು ಆದೇಶಗಳನ್ನು ಅಂಗೀಕರಿಸಿದ್ದು, 2017ರ ನವೆಂಬರ್ 28ರಂದು ಮೂರನೇ ಆದೇಶ ಹೊರಡಿಸಿತ್ತು. ಈ ಸಂಬಂಧ 2017ರ ಡಿಸೆಂಬರ್ನಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿ ಆದೇ ದಿನ ಕಂದಾಯ ಅಧಿಕಾರಿಗಳು ಮೂರು ಮಹಜರುಗಳನ್ನು ನಡೆಸಿ ಭೂಮಿ ವಶಕ್ಕೆ ಪಡೆದಿದ್ದರು.</p>.<p>‘ಟ್ರಸ್ಟ್ ಹೊಂದಿರುವ ಜಮೀನಿಗೆ ಸಂಬಂಧಿಸಿದಂತೆ ಭೂ ಸುಧಾರಣಾ ಕಾಯ್ದೆಯಡಿ ಯಾವುದೇ ಅರ್ಜಿಗಳು ಬಂದಿಲ್ಲ. 400 ಎಕರೆ ಜಮೀನು ಹೊಂದಿರುವ ಬಗ್ಗೆ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಸ್ಟ್ನಿಂದಲೇ ಘೋಷಣೆ ಸಲ್ಲಿಸಲಾಗಿದೆ. ಅಲ್ಲದೇ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಆದರೂ, ಭೂಮಿಯನ್ನು ಸರ್ಕಾರಕ್ಕೆ ಒಪ್ಪಿಸುವಂತೆ ನ್ಯಾಯ ಮಂಡಳಿ ಆದೇಶಿಸಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>2010ರಲ್ಲಿ ಇದೇ ರೀತಿಯ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಟ್ರಸ್ಟ್ ಹೈಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣವನ್ನು ಪುನರ್ ಪರಿಶೀಲಿಸುವಂತೆ ಹೈಕೋರ್ಟ್ ಈ ಹಿಂದೆಯೂ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಗಡಿ ರಸ್ತೆಗೆ ಹೊಂದಿಕೊಂಡಂತೆ ಇರುವ 354 ಎಕರೆ 10 ಗುಂಟೆ ಜಾಗವನ್ನು ಜಮ್ನಾಲಾಲ್ ಬಜಾಜ್ಟ್ರಸ್ಟ್ಗೆ ಮರಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.</p>.<p>‘ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ ನಿಬಂಧನೆಗಳನ್ನು ಮೀರಿ ಹೆಚ್ಚುವರಿ ಭೂಮಿಯನ್ನು ಈ ಟ್ರಸ್ಟ್ ಹೊಂದಿದೆ’ ಎಂದು ಭೂ ನ್ಯಾಯಮಂಡಳಿ (ಬೆಂಗಳೂರು ಉತ್ತರ) ತೀರ್ಪು ನೀಡಿತ್ತು.</p>.<p>ಇದನ್ನು ಪ್ರಶ್ನಿಸಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ಕುಮಾರ್ ಅವರಿದ್ದ ಪೀಠ, ನ್ಯಾಯಮಂಡಳಿಯ ಈ ನಿಲುವಿಗೆ ಅತೃಪ್ತಿ ವ್ಯಕ್ತಪಡಿಸಿದೆ.</p>.<p>ನ್ಯಾಯ ಮಂಡಳಿಯ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿ ಮೌಲ್ಯಮಾಪನ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪೀಠ ಸೂಚನೆ ನೀಡಿದೆ. ಅಲ್ಲದೇ, ಕೈಗೊಂಡ ಕ್ರಮಗಳ ಬಗ್ಗೆ ಮೂರು ತಿಂಗಳಲ್ಲಿ ವರದಿ ಮಂಡಿಸುವಂತೆ ನಿರ್ದೇಶನ ನೀಡಿದೆ.</p>.<p>ಭೂ ನ್ಯಾಯ ಮಂಡಳಿಯು ಮೂರು ಆದೇಶಗಳನ್ನು ಅಂಗೀಕರಿಸಿದ್ದು, 2017ರ ನವೆಂಬರ್ 28ರಂದು ಮೂರನೇ ಆದೇಶ ಹೊರಡಿಸಿತ್ತು. ಈ ಸಂಬಂಧ 2017ರ ಡಿಸೆಂಬರ್ನಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿ ಆದೇ ದಿನ ಕಂದಾಯ ಅಧಿಕಾರಿಗಳು ಮೂರು ಮಹಜರುಗಳನ್ನು ನಡೆಸಿ ಭೂಮಿ ವಶಕ್ಕೆ ಪಡೆದಿದ್ದರು.</p>.<p>‘ಟ್ರಸ್ಟ್ ಹೊಂದಿರುವ ಜಮೀನಿಗೆ ಸಂಬಂಧಿಸಿದಂತೆ ಭೂ ಸುಧಾರಣಾ ಕಾಯ್ದೆಯಡಿ ಯಾವುದೇ ಅರ್ಜಿಗಳು ಬಂದಿಲ್ಲ. 400 ಎಕರೆ ಜಮೀನು ಹೊಂದಿರುವ ಬಗ್ಗೆ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಸ್ಟ್ನಿಂದಲೇ ಘೋಷಣೆ ಸಲ್ಲಿಸಲಾಗಿದೆ. ಅಲ್ಲದೇ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಆದರೂ, ಭೂಮಿಯನ್ನು ಸರ್ಕಾರಕ್ಕೆ ಒಪ್ಪಿಸುವಂತೆ ನ್ಯಾಯ ಮಂಡಳಿ ಆದೇಶಿಸಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>2010ರಲ್ಲಿ ಇದೇ ರೀತಿಯ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಟ್ರಸ್ಟ್ ಹೈಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣವನ್ನು ಪುನರ್ ಪರಿಶೀಲಿಸುವಂತೆ ಹೈಕೋರ್ಟ್ ಈ ಹಿಂದೆಯೂ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>