‘ಟ್ರಸ್ಟ್ ಹೊಂದಿರುವ ಜಮೀನಿಗೆ ಸಂಬಂಧಿಸಿದಂತೆ ಭೂ ಸುಧಾರಣಾ ಕಾಯ್ದೆಯಡಿ ಯಾವುದೇ ಅರ್ಜಿಗಳು ಬಂದಿಲ್ಲ. 400 ಎಕರೆ ಜಮೀನು ಹೊಂದಿರುವ ಬಗ್ಗೆ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಸ್ಟ್ನಿಂದಲೇ ಘೋಷಣೆ ಸಲ್ಲಿಸಲಾಗಿದೆ. ಅಲ್ಲದೇ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಆದರೂ, ಭೂಮಿಯನ್ನು ಸರ್ಕಾರಕ್ಕೆ ಒಪ್ಪಿಸುವಂತೆ ನ್ಯಾಯ ಮಂಡಳಿ ಆದೇಶಿಸಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.