‘ನಗರ ಭೂಸಾರಿಗೆ ನಿರ್ದೇಶನಾಲಯದ(ಡಲ್ಟ್) ಶಿಫಾರಸನ್ನು ಸರ್ಕಾರ ಪರಿಗಣಿಸಿಲ್ಲ’ ಎಂದು ಅರ್ಜಿದಾರರು ದೂರಿದ್ದರು. ಈ ಹಿಂದಿನ ವಿಚಾರಣೆ ವೇಳೆ ಡಲ್ಟ್ ಶಿಫಾರಸು ಪರಿಗಣಿಸುವಂತೆ ಪೀಠ ನಿರ್ದೇಶನ ನೀಡಿತ್ತು. ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂಬ ಕಾರಣಕ್ಕೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.