ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿರ್ಬಂಧ ಅಸಾಧ್ಯ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

Last Updated 8 ಏಪ್ರಿಲ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಬ್ಬನ್ ಪಾರ್ಕ್ ಆವರಣದಲ್ಲಿ ವಾಹನ ಸಂಚಾರ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸಲ್ಲಿಸಿದ್ದ ಅಫಿಡವಿಟ್ ಪರಿಗಣಿಸಿದ ನ್ಯಾಯಾಲಯ, ಈ ಸಂಬಂಧದ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಕೈಬಿಟ್ಟಿದೆ.

‘ಕಬ್ಬನ್ ಪಾರ್ಕ್‌ನಲ್ಲಿ ಸಂಚಾರ ತಪ್ಪಿಸಲು ಸಾಧ್ಯವಿಲ್ಲ. ಆದ್ದರಿಂದ ಮೊದಲಿನಂತೆ ಮುಂದುವರಿಸಬೇಕು ಎಂಬ ತೀರ್ಮಾನವನ್ನು 2020ರ ನವೆಂಬರ್ 11ರಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಅಫಿಡವಿಟ್‌ನಲ್ಲಿ ಸರ್ಕಾರ ತಿಳಿಸಿದೆ.

‘ನಗರ ಭೂಸಾರಿಗೆ ನಿರ್ದೇಶನಾಲಯದ(ಡಲ್ಟ್‌) ಶಿಫಾರಸನ್ನು ಸರ್ಕಾರ ಪರಿಗಣಿಸಿಲ್ಲ’ ಎಂದು ಅರ್ಜಿದಾರರು ದೂರಿದ್ದರು. ಈ ಹಿಂದಿನ ವಿಚಾರಣೆ ವೇಳೆ ಡಲ್ಟ್‌ ಶಿಫಾರಸು ಪರಿಗಣಿಸುವಂತೆ ಪೀಠ ನಿರ್ದೇಶನ ನೀಡಿತ್ತು. ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂಬ ಕಾರಣಕ್ಕೆ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ವಿಚಾರಣೆ ಕೈಬಿಟ್ಟ ಪೀಠ, ‘ಈ ನಿರ್ಧಾರ ಅರ್ಜಿದಾರರಿಗೆ ತೃ‍ಪ್ತಿ ಎನಿಸದಿದ್ದರೆ ಕಾನೂನಿನ ಪ್ರಕಾರ ಮುಂದುವರಿಯಲು ಸ್ವಾತಂತ್ರ್ಯವಿದೆ’ ಎಂದು ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT