ಮನವಿ ಪುರಸ್ಕರಿಸಿದ ನ್ಯಾಯಪೀಠ, ಮೂರು ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಜ.18ಕ್ಕೆ ಮುಂದೂಡಿತು. ಮುನಿರತ್ನ ವಿರುದ್ಧ ದಾಖಲಿಸಿರುವ ದೂರಿನ ಮೇರೆಗೆ ಜಾಲಹಳ್ಳಿ ಠಾಣೆ ಪೊಲೀಸರು ನಡೆಸಿರುವ ತನಿಖೆ ಪರಿಶೀಲಿಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸಬೇಕು. ಪೊಲೀಸರು ತನಿಖೆಯನ್ನು ಸರಿಯಾಗಿ ನಡೆಸಿದ್ದಾರೆಯೇ, ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ಹಾಗೆಯೇ, ತನಿಖೆ ನಡೆಸಬೇಕಿರುವ ಅಂಶಗಳನ್ನು ಗುರುತಿಸಬೇಕು. ಆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ಪೀಠ ನಿರ್ದೇಶಿಸಿತು.