ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ‘ತಜ್ಞರ ಸಮಿತಿ ನೀಡಿರುವ ವರದಿಯಂತೆ ಬಿಎಂಆರ್ಸಿಎಲ್ ನವೆಂಬರ್ 26ರಂದು ಸಲ್ಲಿಸಿರುವ ಮೆಮೊ ಅನುಸಾರ 577 ಮರಗಳನ್ನು ಕತ್ತರಿಸಬಹುದು. ಅಂತೆಯೇ 18 ಮರಗಳನ್ನು ಸ್ಥಳಾಂತರ ಮಾಡಬೇಕು. ಕತ್ತರಿಸುವ ಮರಗಳಿಗೆ ಪರ್ಯಾಯವಾಗಿ ತಜ್ಞರ ಸಮಿತಿ ಸೂಚಿಸಿದಂತೆ ಅರಣ್ಯೀಕರಣ ಕೈಗೊಳ್ಳಬೇಕು. ಕಾಲಮಿತಿಯಲ್ಲಿ ಯೋಜನೆ ಪೂರ್ಣಗೊಳಿಸಬೇಕು ಮತ್ತು ಈ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು’ ಎಂದು ನಿಗಮಕ್ಕೆ ಆದೇಶಿಸಿದೆ.