‘ಪರಿಸರಕ್ಕೆ ನಷ್ಟ ಉಂಟಾಗುವುದು ನಿಜ. ಆದರೆ, ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಂಚಾರ ದಟ್ಟಣೆ, ರಸ್ತೆ ಅಪಘಾತ ತಡೆಯಲು 10 ಮರಗಳನ್ನು ಕಡಿಯುವುದು ಅನಿವಾರ್ಯ ಎಂದು ತಜ್ಞರ ಸಮಿತಿ ತಿಳಿಸಿದೆ. ಈ ರಸ್ತೆಯಲ್ಲಿ ಆಸ್ಪತ್ರೆಗಳು ಇರುವುದನ್ನೂ ಗಮನದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.