ರಿಟ್ ಅರ್ಜಿಯನ್ನು ಪುನರ್ಸ್ಥಾಪಿಸಲು ಕೋರಲಾದ ಮಧ್ಯಂತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ. ‘ಅರ್ಜಿ ಪುರಸ್ಕರಿಸಲಾಗುತ್ತಿದೆ. ಆದರೆ, ನಿಮ್ಮ ನಿರ್ಲಕ್ಷ್ಯಕ್ಕೆ ದಂಡ ರೂಪದಲ್ಲಿ, ಕ್ರಿಮಿನಲ್ ವಕೀಲ ಸಿ.ಎಚ್.ಹನುಮಂತರಾಯ ಅವರು ಬರೆದಿರುವ ವಕೀಲರೊಬ್ಬರ ವಗೈರೆಗಳು ಪುಸ್ತಕವನ್ನು ಅಕಾಡೆಮಿಗೆ ನೀಡಿ ಮತ್ತು ಒಂದು ವಾರದೊಳಗೆ ಕಚೇರಿ ಆಕ್ಷೇಪಣೆ ಪ್ರಕ್ರಿಯೆಯನ್ನು ಪೂರೈಸಿ‘ ಎಂದು ಆದೇಶಿಸಿದೆ.