<p><strong>ಬೆಂಗಳೂರು:</strong> ‘ಬ್ರಿಟನ್ನಿಂದ ರಾಜ್ಯಕ್ಕೆ ಬಂದಿದ್ದಾರೆ ಎಂದು ಪತ್ತೆಯಾದ 3,062 ಪ್ರಯಾಣಿಕರಲ್ಲಿ 2,292 ಜನರಿಗೆ ಮಾತ್ರ ಕೋವಿಡ್ ಪರೀಕ್ಷೆ ನಡೆಸಿರುವುದೇಕೆ’ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಪ್ರಶ್ನೆ ಮಾಡಿದೆ.</p>.<p>ರಾಜ್ಯ ಸರ್ಕಾರ ಸಲ್ಲಿಸಿದ್ದ ವಿವರ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸದಿರಲು ಕಾರಣ ಏನು, 770 ಮಂದಿ ಕೋವಿಡ್ ಪರೀಕ್ಷೆಯಿಂದ ಹೊರಗಿರಿಸಿರುವುದು ಏಕೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ನಿರ್ದೇಶನ ನೀಡಿದೆ.</p>.<p>‘34 ಪ್ರಯಾಣಿಕರು ಮತ್ತು 14 ಮಂದಿ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ದೃಢಪಟ್ಟಿದೆ. 176 ಜನರ ಕೋವಿಡ್ ಪರೀಕ್ಷಾ ವರದಿ ಬರಬೇಕಿದೆ. 75 ಪ್ರಯಾಣಿಕರು ಪತ್ತೆಯಾಗಿಲ್ಲ’ ಎಂದು ಸರ್ಕಾರ ವಿವರ ಸಲ್ಲಿಸಿತ್ತು.</p>.<p>‘ಕೋವಿಡ್ ಪರೀಕ್ಷಾ ವರದಿ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಪ್ರಯೋಗಾಲಯಗಳಿಂದ ₹49,200 ದಂಡ ವಸೂಲಿ ಮಾಡಲಾಗಿದೆ. ಇನ್ನೂ ₹9.9 ಕೋಟಿ ದಂಡ ವಸೂಲಿ ಪ್ರಕ್ರಿಯೆ ಪರಿಶೀಲನೆ ಹಂತದಲ್ಲಿದೆ’ ಎಂದು ಸರ್ಕಾರ ಇದೇ ವೇಳೆ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬ್ರಿಟನ್ನಿಂದ ರಾಜ್ಯಕ್ಕೆ ಬಂದಿದ್ದಾರೆ ಎಂದು ಪತ್ತೆಯಾದ 3,062 ಪ್ರಯಾಣಿಕರಲ್ಲಿ 2,292 ಜನರಿಗೆ ಮಾತ್ರ ಕೋವಿಡ್ ಪರೀಕ್ಷೆ ನಡೆಸಿರುವುದೇಕೆ’ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಪ್ರಶ್ನೆ ಮಾಡಿದೆ.</p>.<p>ರಾಜ್ಯ ಸರ್ಕಾರ ಸಲ್ಲಿಸಿದ್ದ ವಿವರ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸದಿರಲು ಕಾರಣ ಏನು, 770 ಮಂದಿ ಕೋವಿಡ್ ಪರೀಕ್ಷೆಯಿಂದ ಹೊರಗಿರಿಸಿರುವುದು ಏಕೆ ಎಂಬುದನ್ನು ಸ್ಪಷ್ಟಪಡಿಸಬೇಕು’ ಎಂದು ನಿರ್ದೇಶನ ನೀಡಿದೆ.</p>.<p>‘34 ಪ್ರಯಾಣಿಕರು ಮತ್ತು 14 ಮಂದಿ ಪ್ರಾಥಮಿಕ ಸಂಪರ್ಕಿತರಲ್ಲಿ ಕೋವಿಡ್ ದೃಢಪಟ್ಟಿದೆ. 176 ಜನರ ಕೋವಿಡ್ ಪರೀಕ್ಷಾ ವರದಿ ಬರಬೇಕಿದೆ. 75 ಪ್ರಯಾಣಿಕರು ಪತ್ತೆಯಾಗಿಲ್ಲ’ ಎಂದು ಸರ್ಕಾರ ವಿವರ ಸಲ್ಲಿಸಿತ್ತು.</p>.<p>‘ಕೋವಿಡ್ ಪರೀಕ್ಷಾ ವರದಿ ನೀಡಲು ವಿಳಂಬ ಮಾಡಿದ ಕಾರಣಕ್ಕೆ ಪ್ರಯೋಗಾಲಯಗಳಿಂದ ₹49,200 ದಂಡ ವಸೂಲಿ ಮಾಡಲಾಗಿದೆ. ಇನ್ನೂ ₹9.9 ಕೋಟಿ ದಂಡ ವಸೂಲಿ ಪ್ರಕ್ರಿಯೆ ಪರಿಶೀಲನೆ ಹಂತದಲ್ಲಿದೆ’ ಎಂದು ಸರ್ಕಾರ ಇದೇ ವೇಳೆ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>