ಬೆಂಗಳೂರು: ‘ಜೆಡಿಎಸ್–ಕಾಂಗ್ರೆಸ್ ನೇತೃತ್ವದ ಸರ್ಕಾರವು ಕ್ಷೇತ್ರದ ಅಭಿವೃದ್ಧಿಗೆ ನೀಡಿದ್ದ ಹಣವನ್ನು, ಬಿಜೆಪಿ ನೇತೃತ್ವದ ಸರ್ಕಾರ ತಡೆಹಿಡಿದಿತ್ತು. ₹110.75 ಕೋಟಿ ಅನುದಾನವನ್ನು ಒಂದು ತಿಂಗಳೊಳಗೆ ಬಿಡುಗಡೆ ಮಾಡಬೇಕು ಎಂದು ಹೈಕೋರ್ಟ್ ಬುಧವಾರ ಆದೇಶ ನೀಡಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕು ಪಡೆಯಲಿವೆ’ ಎಂದು ದಾಸರಹಳ್ಳಿ ಶಾಸಕ ಆರ್. ಮಂಜುನಾಥ್ ಹೇಳಿದರು.