ವಿಚಾರಣೆ ವೇಳೆ ಕೇಂದ್ರಸರ್ಕಾರದ ಪರ ವಕೀಲ ಎ. ವಿ. ನಿಶಾಂತ್ ಅವರು ಮಾತನಾಡಿ, ‘ಕೇಂದ್ರ ಸರ್ಕಾರಿ ಕೈಗಾರಿಕಾ ನ್ಯಾಯಮಂಡಳಿ ಮತ್ತು ಕಾರ್ಮಿಕ ನ್ಯಾಯಾಲಯದ ಪೀಠಾಸೀನ ಅಧಿಕಾರಿಗಳ ನೇಮಕಕ್ಕೂ ಮುನ್ನ ಪರಿಶೀಲನೆ ಮತ್ತು ಆಯ್ಕೆ ಸಮಿತಿಯ ಅಧ್ಯಕ್ಷರಾದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸಭೆ ಸೇರಿ ತೀರ್ಮಾನ ಕೈಗೊಳ್ಳಬೇಕಿರುತ್ತದೆ. ಈ ನಿಟ್ಟಿನಲ್ಲಿ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ’ ಎಂದು ನ್ಯಾಯಪೀಠಕ್ಕೆ ಹೇಳಿದರು.