ವಿಚಾರಣೆ ವೇಳೆ ರಾಕ್ಲೈನ್ ವೆಂಕಟೇಶ್ ಪರ ಹಿರಿಯ ವಕೀಲ ಎಂ.ಶ್ಯಾಮಸುಂದರ್, ‘ಮಾಲ್ ಅನ್ನು ಲಾಕ್ ಮಾಡಲು ಬಿಬಿಎಂಪಿಯ ಪ್ರತ್ಯೇಕ ಕಾಯ್ದೆಯಲ್ಲಾಗಲೀ ಅಥವಾ ಕೆಎಂಸಿ ಕಾಯ್ದೆಯಲ್ಲಾಗಲೀ ಎಲ್ಲೂ ಅವಕಾಶವಿಲ್ಲ. ಈ ಹಿಂದೆ ಇದೇ ಹೈಕೋರ್ಟ್ನ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂತ್ರಿಮಾಲ್ ಪ್ರಕರಣದಲ್ಲಿ ಇದನ್ನು ಸ್ಪಷ್ಟಪಡಿಸಿದೆ. ತೆರಿಗೆ ಸಂಗ್ರಹಿಸಲು ಬಿಬಿಎಂಪಿಗೆ ಪರ್ಯಾಯ ಮಾರ್ಗಗಳಿವೆ. ಆದ್ದರಿಂದ, ರಾಕ್ಲೈನ್ ಮಾಲ್ ಬೀಗ ತೆರೆಯಲು ಆದೇಶಿಸಬೇಕು‘ ಎಂದು ಕೋರಿದರು.