ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಆಲಿಸಿದ ನ್ಯಾಯಪೀಠ, ‘ಬಿಬಿಎಂಪಿ ಸಾರ್ವಜನಿಕರಿಂದ ತೆರಿಗೆ ಸಂಗ್ರಹಿಸುತ್ತಿದೆ. ಆದರೆ, ಇದಕ್ಕೆ ಪ್ರತಿಯಾಗಿ ಸರಿಯಾದ ರಸ್ತೆ, ಪಾದಚಾರಿ ಮಾರ್ಗಗಳ ಸುಧಾರಣೆಗೆ ಮುಂದಾಗುತ್ತಿಲ್ಲ. ಕೆಲವೆಡೆಯಂತೂ ಪಾದಚಾರಿ ಮಾರ್ಗಗಳನ್ನು ವಾಹನಗಳ ನಿಲುಗಡೆಯನ್ನಾಗಿ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಅನುಪಾಲನಾ ವರದಿ ಸಲ್ಲಿಸಬೇಕು’ ಎಂದು ಬಿಬಿಎಂಪಿಗೆ ನಿರ್ದೇಶಿಸಿತು.