<p>ಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಲಾಗಿದೆಯೇ ಎಂಬುದನ್ನು ಖಚಿಪಡಿಸಿಕೊಳ್ಳಲು ಅಮಿಕಸ್ ಕ್ಯೂರಿ ಸೇರಿದಂತೆ ಎಲ್ಲಾ ಸಹಭಾಗಿ ಸಂಸ್ಥೆಗಳ ಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಆರ್ಟಿಇ ಕಾಯ್ದೆ ಸಮಪರ್ಕ ಅನುಷ್ಠಾನದ ಕುರಿತು ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.</p>.<p>‘ಬಿಬಿಎಂಪಿ ಮುಖ್ಯ ಆಯುಕ್ತರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೀಡಿರುವ ಪತ್ರವನ್ನು ಗಮನಿಸಿದರೆ ಸಮೀಕ್ಷೆಯ ಉದ್ದೇಶವನ್ನು ಪಾಲಿಕೆ ಇನ್ನೂ ಅರ್ಥ ಮಾಡಿಕೊಂಡಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>‘ಸಭೆ ನಡೆಸದಿದ್ದರೆ, ಸಮೀಕ್ಷೆ ಕಾರ್ಯವನ್ನು ಬಿಬಿಎಂಪಿ ನಡೆಸಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಲು ಮುಂದಾಗಬೇಕಾಗುತ್ತದೆ’ ಎಂದು ಪೀಠ ತಿಳಿಸಿತು.</p>.<p>ರಾಜ್ಯ ಸರ್ಕಾರ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ದೋಷಗಳು ಕಂಡು ಬಂದರೆ ಮೆಮೊ ಸಲ್ಲಿಸಲು ಅಮಿಕಸ್ ಕ್ಯೂರಿ ಅವರಿಗೆ ಪೀಠ ಅನುಮತಿ ನೀಡಿತು. ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿತು.</p>.<p>ಆರ್ಟಿಇ ನಿಯಮ 6ನೇ ನಿಯಮದ ಪ್ರಕಾರ ಸ್ಥಳೀಯ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸುವ ಮೂಲಕ ಎಲ್ಲಾ ಮಕ್ಕಳ ಮಾಹಿತಿ ಸಂಗ್ರಹಿಸಿ ನಿರ್ವಹಿಸಬೇಕು. ಅದರಂತೆ 2020ರ ಏಪ್ರಿಲ್ 30ರೊಳಗೆ ಸಮೀಕ್ಷೆ ಪೂರ್ಣಗೊಳಿಸುವಂತೆ ಈ ಹಿಂದೆ ಪೀಠ ಮಧ್ಯಂತರ ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಲಾಗಿದೆಯೇ ಎಂಬುದನ್ನು ಖಚಿಪಡಿಸಿಕೊಳ್ಳಲು ಅಮಿಕಸ್ ಕ್ಯೂರಿ ಸೇರಿದಂತೆ ಎಲ್ಲಾ ಸಹಭಾಗಿ ಸಂಸ್ಥೆಗಳ ಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಆರ್ಟಿಇ ಕಾಯ್ದೆ ಸಮಪರ್ಕ ಅನುಷ್ಠಾನದ ಕುರಿತು ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.</p>.<p>‘ಬಿಬಿಎಂಪಿ ಮುಖ್ಯ ಆಯುಕ್ತರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೀಡಿರುವ ಪತ್ರವನ್ನು ಗಮನಿಸಿದರೆ ಸಮೀಕ್ಷೆಯ ಉದ್ದೇಶವನ್ನು ಪಾಲಿಕೆ ಇನ್ನೂ ಅರ್ಥ ಮಾಡಿಕೊಂಡಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>‘ಸಭೆ ನಡೆಸದಿದ್ದರೆ, ಸಮೀಕ್ಷೆ ಕಾರ್ಯವನ್ನು ಬಿಬಿಎಂಪಿ ನಡೆಸಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಲು ಮುಂದಾಗಬೇಕಾಗುತ್ತದೆ’ ಎಂದು ಪೀಠ ತಿಳಿಸಿತು.</p>.<p>ರಾಜ್ಯ ಸರ್ಕಾರ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ದೋಷಗಳು ಕಂಡು ಬಂದರೆ ಮೆಮೊ ಸಲ್ಲಿಸಲು ಅಮಿಕಸ್ ಕ್ಯೂರಿ ಅವರಿಗೆ ಪೀಠ ಅನುಮತಿ ನೀಡಿತು. ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿತು.</p>.<p>ಆರ್ಟಿಇ ನಿಯಮ 6ನೇ ನಿಯಮದ ಪ್ರಕಾರ ಸ್ಥಳೀಯ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸುವ ಮೂಲಕ ಎಲ್ಲಾ ಮಕ್ಕಳ ಮಾಹಿತಿ ಸಂಗ್ರಹಿಸಿ ನಿರ್ವಹಿಸಬೇಕು. ಅದರಂತೆ 2020ರ ಏಪ್ರಿಲ್ 30ರೊಳಗೆ ಸಮೀಕ್ಷೆ ಪೂರ್ಣಗೊಳಿಸುವಂತೆ ಈ ಹಿಂದೆ ಪೀಠ ಮಧ್ಯಂತರ ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>