<p><strong>ಬೆಂಗಳೂರು:</strong> ದಾಖಲೆ ತಿರುಚಿ ನೋಂದಣಿ ಮಾಡುವ ಮೂಲಕ ಸರ್ಕಾರಕ್ಕೆ ತೆರಿಗೆ ವಂಚಿಸಿದ ಆರೋಪದಡಿ ವಿಲಾಸಿ ಲ್ಯಾಂಬೊರ್ಗಿನಿ ಕಾರೊಂದರ ಮಾಲೀಕರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.</p><p>ಈ ಸಂಬಂಧ ಕಾರಿನ ಮಾಲೀಕ ಮತ್ತು ‘ಹಾಯ್ ಕಾರ್ ಕೇರ್’ ಮುಖ್ಯಸ್ಥರೂ ಆದ ಜೆ.ರಾಮಕೃಷ್ಣಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.</p><p>ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಪೀಠ, ‘ಜಪ್ತಿ ಮಾಡಿ ಪೊಲೀಸ್ ಕಸ್ಟಡಿಯಲ್ಲಿರುವ ಲ್ಯಾಂಬೊರ್ಗಿನಿ ಕಾರನ್ನು ಅರ್ಜಿದಾರರಿಗೆ ಒಂದು ವಾರದಲ್ಲಿ ಮರಳಿಸಬೇಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿರುವ ಬೆಂಗಳೂರು ದಕ್ಷಿಣ ವಿಭಾಗದ ಹಿರಿಯ ಮೋಟಾರ್ ವಾಹನ ಇನ್ಸ್ಪೆಕ್ಟರ್ ವಿರುದ್ಧ ಇಲಾಖಾ ತನಿಖೆ ನಡೆಸಬೇಕು’ ಎಂದು ಆದೇಶಿಸಿದೆ.</p><p>‘ಆಕ್ಷೇಪಾರ್ಹವಾದ ಕಾರಿನ ದತ್ತಾಂಶವನ್ನು ಅಳಿಸಿ ಹಾಕಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಮುಚ್ಚಳಿಕೆ ನೀಡಿದ್ದಾರೆ. ಅಂತೆಯೇ, ಹಿರಿಯ ಮೋಟಾರ್ ವಾಹನ ಇನ್ಸ್ಪೆಕ್ಟರ್ ಎನ್.ರಂಜಿತ್ ವಿರುದ್ಧದ ಇಲಾಖಾ ತನಿಖೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.</p><p><strong>ಪ್ರಕರಣವೇನು?:</strong> ಲ್ಯಾಂಬೋರ್ಗಿನಿ ಕಾರನ್ನು 2022ರಲ್ಲಿ ಹರ್ಷ ಇನ್ಫ್ರಾ ಕಾನ್ಸ್ ಪ್ರೈವೇಟ್ ಲಿಮಿಟೆಡ್ನವರು ಖರೀದಿಸಿ, ನೋಂದಣಿಗಾಗಿ ತೆಲಂಗಾಣಕ್ಕೆ ತೆಗೆದುಕೊಂಡು ಹೋಗಿದ್ದರು. ಮೂರು ವರ್ಷ ಬಳಕೆ ಮಾಡಿದ ನಂತರ ಅರ್ಜಿದಾರರಿಗೆ ಮಾರಾಟ ಮಾಡಲಾಗಿತ್ತು.</p><p>ಅರ್ಜಿದಾರರು ಕಾರು ನೋಂದಣಿಗೆ 2025ರ ಸೆಪ್ಟೆಂಬರ್ನಲ್ಲಿ ಸಲ್ಲಿಸಿದ್ದ ದಾಖಲೆಗಳನ್ನು ಕಸ್ತೂರಿ ನಗರದ ಆರ್ಟಿಒ ಅಧಿಕಾರಿಗಳು ಪರಿಶೀಲಿಸಿದ್ದರು. ಈ ವೇಳೆ, ‘ಮೂರು ವರ್ಷಗಳ ಅವಧಿಯ ರಸ್ತೆ ತೆರಿಗೆ ಮತ್ತು ₹37 ಲಕ್ಷ ಹೆಚ್ಚುವರಿ ದಂಡದ ಮೊತ್ತವನ್ನು ತಪ್ಪಿಸಲು ಅಡ್ಡದಾರಿ ಅನುಸರಿಸಿ ದಾಖಲೆಗಳನ್ನು ತಿರುಚಲಾಗಿದೆ’ ಎಂದು ಆರೋಪಿಸಲಾಗಿತ್ತು.</p><p>ಈ ಕುರಿತು ದಾಖಲಾಗಿದ್ದ ದೂರನ್ನು ರದ್ದುಪಡಿಸುವಂತೆ ಕೋರಿ ಕಾರು ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರರ ಪರ ಹೈಕೋರ್ಟ್ ವಕೀಲ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದ್ದರು.</p>.<p><strong>ಜೋಶ್ ಇದೆ ಎಂದ ಮಾತ್ರಕ್ಕೆ...!</strong></p><p>‘ಇನ್ನೊಬ್ಬರ ಮನೆಗೆ ರಾತ್ರಿ 11.30ರ ಸಮಯದಲ್ಲಿ ನುಗ್ಗಿ ಕಾರನ್ನು ಮನೆಯ ಗ್ಯಾರೇಜ್ನಿಂದ ಟೋಯಿಂಗ್ ಮಾಡಿಸಿಕೊಂಡು ತೆಗೆದುಕೊಂಡು ಹೋಗುವ ಅಧಿಕಾರ ಎಲ್ಲಿದೆ? ಎನ್.ರಂಜಿತ್ ಅತ್ಯುತ್ತಮ ಅಧಿಕಾರಿಯಾಗಿರಬಹುದು. ಆದರೆ, ಕಾನೂನಿನ ವ್ಯಾಪ್ತಿಯೊಳಗೆ ನಡೆಯಬೇಕು ಎಂಬ ನೆದರು ಹೊಂದಿರಬೇಕು. ಜೋಶ್ ಇದೆ ಎಂದು ಕಾನೂನಿಗೆ ವಿರುದ್ಧವಾಗಿ ನಡೆಯಲಾಗದು. ಅಧಿಕಾರಿ ದೂರುದಾರರಾಗಿ ಹೇಗೆ ಇನ್ನೊಬ್ಬರ ಮನೆಗೆ ನುಗ್ಗಿ ಕಾರನ್ನು ಜಫ್ತಿ ಮಾಡುತ್ತಾರೆ! ಆ ಕೆಲಸವನ್ನು ಪೊಲೀಸರ ಪಾಲಿಗೆ ಬಿಡಬೇಕಿತ್ತು’ ಎಂದು ನ್ಯಾಯಪೀಠ ಕಿಡಿ ಕಾರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದಾಖಲೆ ತಿರುಚಿ ನೋಂದಣಿ ಮಾಡುವ ಮೂಲಕ ಸರ್ಕಾರಕ್ಕೆ ತೆರಿಗೆ ವಂಚಿಸಿದ ಆರೋಪದಡಿ ವಿಲಾಸಿ ಲ್ಯಾಂಬೊರ್ಗಿನಿ ಕಾರೊಂದರ ಮಾಲೀಕರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.</p><p>ಈ ಸಂಬಂಧ ಕಾರಿನ ಮಾಲೀಕ ಮತ್ತು ‘ಹಾಯ್ ಕಾರ್ ಕೇರ್’ ಮುಖ್ಯಸ್ಥರೂ ಆದ ಜೆ.ರಾಮಕೃಷ್ಣಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.</p><p>ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಪೀಠ, ‘ಜಪ್ತಿ ಮಾಡಿ ಪೊಲೀಸ್ ಕಸ್ಟಡಿಯಲ್ಲಿರುವ ಲ್ಯಾಂಬೊರ್ಗಿನಿ ಕಾರನ್ನು ಅರ್ಜಿದಾರರಿಗೆ ಒಂದು ವಾರದಲ್ಲಿ ಮರಳಿಸಬೇಕು. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿರುವ ಬೆಂಗಳೂರು ದಕ್ಷಿಣ ವಿಭಾಗದ ಹಿರಿಯ ಮೋಟಾರ್ ವಾಹನ ಇನ್ಸ್ಪೆಕ್ಟರ್ ವಿರುದ್ಧ ಇಲಾಖಾ ತನಿಖೆ ನಡೆಸಬೇಕು’ ಎಂದು ಆದೇಶಿಸಿದೆ.</p><p>‘ಆಕ್ಷೇಪಾರ್ಹವಾದ ಕಾರಿನ ದತ್ತಾಂಶವನ್ನು ಅಳಿಸಿ ಹಾಕಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಮುಚ್ಚಳಿಕೆ ನೀಡಿದ್ದಾರೆ. ಅಂತೆಯೇ, ಹಿರಿಯ ಮೋಟಾರ್ ವಾಹನ ಇನ್ಸ್ಪೆಕ್ಟರ್ ಎನ್.ರಂಜಿತ್ ವಿರುದ್ಧದ ಇಲಾಖಾ ತನಿಖೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.</p><p><strong>ಪ್ರಕರಣವೇನು?:</strong> ಲ್ಯಾಂಬೋರ್ಗಿನಿ ಕಾರನ್ನು 2022ರಲ್ಲಿ ಹರ್ಷ ಇನ್ಫ್ರಾ ಕಾನ್ಸ್ ಪ್ರೈವೇಟ್ ಲಿಮಿಟೆಡ್ನವರು ಖರೀದಿಸಿ, ನೋಂದಣಿಗಾಗಿ ತೆಲಂಗಾಣಕ್ಕೆ ತೆಗೆದುಕೊಂಡು ಹೋಗಿದ್ದರು. ಮೂರು ವರ್ಷ ಬಳಕೆ ಮಾಡಿದ ನಂತರ ಅರ್ಜಿದಾರರಿಗೆ ಮಾರಾಟ ಮಾಡಲಾಗಿತ್ತು.</p><p>ಅರ್ಜಿದಾರರು ಕಾರು ನೋಂದಣಿಗೆ 2025ರ ಸೆಪ್ಟೆಂಬರ್ನಲ್ಲಿ ಸಲ್ಲಿಸಿದ್ದ ದಾಖಲೆಗಳನ್ನು ಕಸ್ತೂರಿ ನಗರದ ಆರ್ಟಿಒ ಅಧಿಕಾರಿಗಳು ಪರಿಶೀಲಿಸಿದ್ದರು. ಈ ವೇಳೆ, ‘ಮೂರು ವರ್ಷಗಳ ಅವಧಿಯ ರಸ್ತೆ ತೆರಿಗೆ ಮತ್ತು ₹37 ಲಕ್ಷ ಹೆಚ್ಚುವರಿ ದಂಡದ ಮೊತ್ತವನ್ನು ತಪ್ಪಿಸಲು ಅಡ್ಡದಾರಿ ಅನುಸರಿಸಿ ದಾಖಲೆಗಳನ್ನು ತಿರುಚಲಾಗಿದೆ’ ಎಂದು ಆರೋಪಿಸಲಾಗಿತ್ತು.</p><p>ಈ ಕುರಿತು ದಾಖಲಾಗಿದ್ದ ದೂರನ್ನು ರದ್ದುಪಡಿಸುವಂತೆ ಕೋರಿ ಕಾರು ಮಾಲೀಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರರ ಪರ ಹೈಕೋರ್ಟ್ ವಕೀಲ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದ್ದರು.</p>.<p><strong>ಜೋಶ್ ಇದೆ ಎಂದ ಮಾತ್ರಕ್ಕೆ...!</strong></p><p>‘ಇನ್ನೊಬ್ಬರ ಮನೆಗೆ ರಾತ್ರಿ 11.30ರ ಸಮಯದಲ್ಲಿ ನುಗ್ಗಿ ಕಾರನ್ನು ಮನೆಯ ಗ್ಯಾರೇಜ್ನಿಂದ ಟೋಯಿಂಗ್ ಮಾಡಿಸಿಕೊಂಡು ತೆಗೆದುಕೊಂಡು ಹೋಗುವ ಅಧಿಕಾರ ಎಲ್ಲಿದೆ? ಎನ್.ರಂಜಿತ್ ಅತ್ಯುತ್ತಮ ಅಧಿಕಾರಿಯಾಗಿರಬಹುದು. ಆದರೆ, ಕಾನೂನಿನ ವ್ಯಾಪ್ತಿಯೊಳಗೆ ನಡೆಯಬೇಕು ಎಂಬ ನೆದರು ಹೊಂದಿರಬೇಕು. ಜೋಶ್ ಇದೆ ಎಂದು ಕಾನೂನಿಗೆ ವಿರುದ್ಧವಾಗಿ ನಡೆಯಲಾಗದು. ಅಧಿಕಾರಿ ದೂರುದಾರರಾಗಿ ಹೇಗೆ ಇನ್ನೊಬ್ಬರ ಮನೆಗೆ ನುಗ್ಗಿ ಕಾರನ್ನು ಜಫ್ತಿ ಮಾಡುತ್ತಾರೆ! ಆ ಕೆಲಸವನ್ನು ಪೊಲೀಸರ ಪಾಲಿಗೆ ಬಿಡಬೇಕಿತ್ತು’ ಎಂದು ನ್ಯಾಯಪೀಠ ಕಿಡಿ ಕಾರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>