ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ಕುಮಾರ್, ‘ಬೇರೆ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿದೆ ಎಂಬ ಕಾರಣಕ್ಕೆ ರವಿ ಪೂಜಾರಿ ವಿರುದ್ಧ ಸಾಕ್ಷ್ಯಗಳಿಲ್ಲ ಅಥವಾ ಆತ ದೋಷಿ ಅಲ್ಲ ಎಂದು ನಿರ್ಣಯಿಸಲು ಆಗುವುದಿಲ್ಲ. ಆತನ ವಿರುದ್ಧ ಹಲವು ಪ್ರಕರಣಗಳು ಬಾಕಿ ಇವೆ. ಜಾಮೀನು ನೀಡಿದರೆ ನಿಯಮಿತವಾಗಿ ವಿಚಾರಣೆಗೆ ಹಾಜರಾಗುವ ಬಗ್ಗೆ ಖಾತ್ರಿ ಇಲ್ಲ’ ಎಂದು ಅಭಿಪ್ರಾಯಿಸಿದರು. ಜಾಮೀನು ಅರ್ಜಿ ತಿರಸ್ಕರಿಸಿದ ಪೀಠ, ವಿಚಾರಣೆ ಚುರುಕುಗೊಳಿಸುವಂತೆ ಅಧೀನ ನ್ಯಾಯಾಲಯಕ್ಕೆ ನಿರ್ದೇಶನ ನೀಡಿತು.