‘ಮೃತ ಮಹಿಳೆ ಮದ್ಯ ವ್ಯಸನಿಯಾಗಿದ್ದಳು ಎಂಬುದನ್ನು ಸಾಕ್ಷ್ಯಗಳು ದೃಢಪಡಿಸುತ್ತಿವೆ. ಇಬ್ಬರು ಮಕ್ಕಳ ತಾಯಿಯಾಗಿದ್ದ ಆಕೆ ಮನೆ ಕೆಲಸ ಮಾಡುತ್ತಿರಲಿಲ್ಲ. ಗೌರಿಗಣೇಶ ಹಬ್ಬದ ದಿನ ಅಡುಗೆ ಮಾಡಿಲ್ಲ, ಮಕ್ಕಳಿಗೆ ಊಟ ಕೊಟ್ಟಿಲ್ಲ. ಪಾನಮತ್ತಳಾಗಿ ಮಲಗಿದ್ದಾಳೆ ಎಂದು ಕೋಪಗೊಂಡ ಪತಿ ದಿಢೀರ್ ಆವೇಶದಲ್ಲಿ ಆಕೆಗೆ ದೊಣ್ಣೆಯಿಂದ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ಪತಿಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ ಎಂಬುದು ಕಂಡುಬಂದಿದೆ. ಹಾಗಾಗಿ, ಇದು ಉದ್ದೇಶಪೂರ್ವಕವಲ್ಲದ ನರ ಹತ್ಯೆ ಎಂದೇ ಪರಿಗಣಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.