ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಬಸವರಾಜ್,‘ಲೋಕಾಯುಕ್ತ ಸರ್ಕಾರಿ ನೌಕರರ ಭ್ರಷ್ಟಾಚಾರದ ಆರೋಪಗಳ ಬಗ್ಗೆ ದಾಖಲಾಗುವ ದೂರುಗಳ ಕುರಿತು ಕ್ರಮ ಕೈಗೊಳ್ಳಬೇಕು.ಸಾರ್ವಜನಿಕ ಆಡಳಿತವನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸಬೇಕು. ಆದರೆ, ಈಗಿರುವ ಲೋಕಾಯುಕ್ತರು ತಮ್ಮ ಮಿತಿಯನ್ನು ಮೀರಿ,
ಅಸಾಂವಿಧಾನಿಕವಾಗಿ ನಡೆದು
ಕೊಂಡಿದ್ದಾರೆ ಮತ್ತು ಸಾಂವಿಧಾನಿಕ ವಾಗಿ ಸ್ಥಾಪಿತವಾದ ಹೈಕೋರ್ಟ್ಗೆ ಪರ್ಯಾಯವಾಗಿ ಕಾರ್ಯನಿರ್ವಹಿಸಿದ್ದಾರೆ’ ಎಂದು ದೂರಿದರು.