ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ‘ಸುಬ್ರಹ್ಮಣ್ಯಪುರ ಕೆರೆ ಪ್ರದೇಶದ 3.39 ಎಕರೆ ಪ್ರದೇಶದಲ್ಲಿ ಕೊಳೆಗೇರಿ ನಿವಾಸಿಗಳಿದ್ದು, ಅವರನ್ನು ತೆರವುಗೊಳಿಸುವುದು ಕೊಳೆಗೇರಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಗೆ ಒಳಪಟ್ಟಿದೆ. ಅವರಿಗೆ ಈ ವಿಚಾರ ತಿಳಿಸಲಾಗಿದೆ. ಅದೇ ರೀತಿ ಬೇಗೂರು ಕೆರೆ ಒತ್ತುವರಿ ತೆರವು ಬಗ್ಗೆಯೂ ಸಂಬಂಧಿಸಿದ ತಹಶೀಲ್ದಾರ್ಗೆ ಬಿಬಿಎಂಪಿ ಅಧಿಕಾರಿಗಳು ಪತ್ರ ಬರೆದಿದ್ದಾರೆ’ ಎಂದರು.