ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ‘ಕಾಮಗಾರಿ ಪೂರ್ಣಗೊಳಿಸಲು ಭೂ ಸ್ವಾಧೀನ, ಮರಗಳ ತೆರವು ಸೇರಿದಂತೆ ಅನೇಕ ಅಡಚಣೆಗಳಿದ್ದವು. ಈಗ ಅವೆಲ್ಲಾ ನಿವಾರಣೆಯಾಗಿವೆ. ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಆದಷ್ಟು ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲಾಗುವುದು. ಈ ಕುರಿತ ವಿವರವಾದ ಪ್ರಮಾಣಪತ್ರ ಸಲ್ಲಿಸಲು ಕಾಲಾವಕಾಶ ಬೇಕು’ ಎಂದು ಮನವಿ ಮಾಡಿದರು.