ಮಡಿವಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣದಲ್ಲಿ ವಾಸುದೇವ ಅಲಿಯಾಸ್ ವಾಸು (37) ಪ್ರಮುಖ ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ಎಂ.ವಿನೋದ್ ಕುಮಾರ್, ಅರ್ಜಿದಾರ ಆರೋಪಿಗೆ ‘ಲೈಫ್ ಕೇರ್ ಆಸ್ಪತ್ರೆ’ ನಿರ್ವಾಹಕ ನಿರ್ದೇಶಕರು ನೀಡಿದ್ದ ಶಿಫಾರಸು ಪತ್ರವನ್ನು ಆಕ್ಷೇಪಿಸಿ, ಪೆರೋಲ್ ನೀಡದಂತೆ ಮನವಿ ಮಾಡಿದರು.