ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್ ಜಾರಿಗೊಳಿಸಿದ 42ನೇ ಎಸಿಎಂಎಂ ನ್ಯಾಯಾಲಯದ ಆದೇಶ ಮತ್ತು ಪ್ರಕರಣ ಕುರಿತು ಕೆ.ಆರ್.ಪುರ ಪೊಲೀಸರು ಸಲ್ಲಿಸಿದ ‘ಬಿ‘ ರಿಪೋರ್ಟ್ ತಿರಸ್ಕರಿಸಿದ, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಬೈರತಿ ಬಸವರಾಜ, ಆರ್.ಶಂಕರ್ ಮತ್ತು ಎ.ಎಂ. ಮಾದಪ್ಪ ಈ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಸಚಿವರ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಗೂ ಬಿ.ಎಲ್.ಆಚಾರ್ಯ ವಾದ ಮಂಡಿಸಿದರು. ವಿಚಾರಣೆಯನ್ನು 2022ರ ಜನವರಿ ಎರಡನೇ ವಾರಕ್ಕೆ ಮುಂದೂಡಲಾಗಿದೆ.