‘ನನ್ನ ಅನುಪಸ್ಥಿತಿಯಲ್ಲಿ ಸೆಷನ್ಸ್ ನ್ಯಾಯಾಲಯ ನನ್ನನ್ನು ಅಪರಾಧಿ ಎಂದು ನಿರ್ಧರಿಸಿದೆ’ ಎಂದು ಆಕ್ಷೇಪಿಸಿ ಶಿವಮೊಗ್ಗದ ಜಿ.ಎಚ್.ಅಬ್ದುಲ್ ಖಾದ್ರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ,‘ವಿಶೇಷ ಕಾಯ್ದೆಗಳಲ್ಲಿ ಆರೋಪಿಯ ಹಾಜರಿ ಇಲ್ಲದೆಯೇ ವಿಚಾರಣೆ ನಡೆಸಲು ಅನುಕೂಲವಾಗುವಂತೆ ಕೆಲವು ಕಾಯ್ದೆಗಳಿಗೆ ಸೂಕ್ತ ತಿದ್ದುಪಡಿ ತರುವ ಬಗ್ಗೆ ಶಾಸಕಾಂಗ ಆಲೋಚಿಸಬೇಕು. ತಿದ್ದುಪಡಿ ತಂದರೆ, ಆರೋಪಿ ಸಮನ್ಸ್ ಜಾರಿಯಿಂದ ತಪ್ಪಿಸಿಕೊಳ್ಳುವ ಅಥವಾ ಆತನ ವಿರುದ್ಧ ವಾರಂಟ್ ಜಾರಿಗೊಳಿಸುವ
ಪ್ರಕ್ರಿಯೆಯನ್ನು ತಡೆಯಲು ನೆರವಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.