ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಪಡಿಗಳ ನೆಲಸಮ: ಪುನರ್ವಸತಿ ಯೋಜನೆ ವಾರದಲ್ಲಿ ಅಂತಿಮ

Last Updated 6 ಮಾರ್ಚ್ 2020, 19:41 IST
ಅಕ್ಷರ ಗಾತ್ರ

ಬೆಂಗಳೂರು: ‘ಅಕ್ರಮ ಬಾಂಗ್ಲಾ ವಲಸಿಗರೆಂದು ಮಹದೇವಪುರ ವಲಯದ ತೂಬರಹಳ್ಳಿ ಹಾಗೂ ಕುಂದಲಹಳ್ಳಿ ವ್ಯಾಪ್ತಿಯಲ್ಲಿ ನಡೆಸಲಾದ ಜೋಪಡಿ ತೆರವು ಕಾರ್ಯಾಚರಣೆಯ ಸಂತ್ರಸ್ತರಿಗೆ ಮಧ್ಯಂತರ ಪರಿಹಾರವಾಗಿ ತಾತ್ಕಾಲಿಕ ಶೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಶಾಶ್ವತ ಪುನರ್ವಸತಿ ಯೋಜನೆಯನ್ನು ಒಂದು ವಾರದಲ್ಲಿ ಅಂತಿಮಗೊಳಿಸಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ‘ಪೀಪಲ್ಸ್ ಯೂನಿ ಯನ್ ಫಾರ್ ಸಿವಿಲ್ ಲಿಬರ್ಟೀಸ್–ಕರ್ನಾಟಕ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ಮೊಮೊ (ಜ್ಞಾಪನಾ ಪತ್ರ) ಸಲ್ಲಿಸಿ, ‘ಶಾಶ್ವತ ಪುನರ್ವಸತಿ ಯೋಜನೆಯನ್ನು ಒಂದು ವಾರದಲ್ಲಿ ಅಂತಿಮಗೊಳಿಸಲಾಗುವುದು’ ಎಂದು ತಿಳಿಸಿದರು. ಇದನ್ನು ದಾಖಲಿಸಿ ಕೊಂಡ ಪೀಠ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT