<p><strong>ಬೆಂಗಳೂರು</strong>: ‘ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳನ್ನು ಮುಂಜಾಗ್ರತಾ ಕ್ರಮವಾಗಿ ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ಅಧಿಕಾರಿಗಳು ಹಳೆಯ ತಪ್ಪುಗಳನ್ನೇ ಮುಂದುವರೆಸುತ್ತಿದ್ದಾರೆ’ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಹುಬ್ಬಳ್ಳಿಯ ದಾವೂದ್ ನದಾಫ್ ಎಂಬುವರನ್ನು 2025ರ ಜೂನ್ 3ರಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದ ಕ್ರಮ ಪ್ರಶ್ನಿಸಿ ಅವರ ಪತ್ನಿ ಪ್ರತಿಭಾ ತಲಪಾಟಿ ಅರ್ಜಿ ಸಲ್ಲಿಸಿದ್ದರು.</p>.ಗೂಂಡಾ ಕಾಯ್ದೆ ಅಡಿ ಬಂಧನ: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್.<p>ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ನೇತೃತ್ವದ ವಿಭಾಗೀಯ ನ್ಯಾಯಪೀಠ (ಧಾರವಾಡ) ಪೊಲೀಸ್ ಇಲಾಖೆಯ ಕ್ರಮಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದೆ.</p>.<p>‘ಅಧಿಕಾರಿಗಳ ಸಣ್ಣಪುಟ್ಟ ತಪ್ಪುಗಳಿಂದಾಗಿ ಎದುರಾಗುವ ತಾಂತ್ರಿಕ ಕಾರಣಗಳ ಆಧಾರದಲ್ಲಿ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಒಳಗಾಗುವಂತಹ ಅರೋಪಿಗಳ ಬಿಡುಗಡೆಗೆ ಆದೇಶಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.ಗೂಂಡಾ ಕಾಯ್ದೆ.<p>ಮುಂಜಾಗ್ರತಾ ಕ್ರಮವಾಗಿ ಬಂಧನದ ಆದೇಶ ಹೊರಡಿಸುವುದಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ಮಾರ್ಗಸೂಚಿಗಳನ್ನು ಸರ್ಕಾರದ ಸಂಬಂಧಿಸಿದ ಇಲಾಖೆಗಳಿಗೆ ರವಾನಿಸುವಂತೆ ನ್ಯಾಯಪೀಠ ಇದೇ ವೇಳೆ ನಿರ್ದೆಶಿಸಿದೆ.</p>.<p>ಗೂಂಡಾ ಕಾಯ್ದೆಯಡಿ ಬಂಧಿಸುವಾಗ 13 ಅಂಶಗಳ ಮಾರ್ಗಸೂಚಿ ಪಾಲನೆ ಮಾಡುವಂತೆ ಹೈಕೋರ್ಟ್ 2019ರಲ್ಲಿ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳನ್ನು ಮುಂಜಾಗ್ರತಾ ಕ್ರಮವಾಗಿ ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ಅಧಿಕಾರಿಗಳು ಹಳೆಯ ತಪ್ಪುಗಳನ್ನೇ ಮುಂದುವರೆಸುತ್ತಿದ್ದಾರೆ’ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಹುಬ್ಬಳ್ಳಿಯ ದಾವೂದ್ ನದಾಫ್ ಎಂಬುವರನ್ನು 2025ರ ಜೂನ್ 3ರಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದ ಕ್ರಮ ಪ್ರಶ್ನಿಸಿ ಅವರ ಪತ್ನಿ ಪ್ರತಿಭಾ ತಲಪಾಟಿ ಅರ್ಜಿ ಸಲ್ಲಿಸಿದ್ದರು.</p>.ಗೂಂಡಾ ಕಾಯ್ದೆ ಅಡಿ ಬಂಧನ: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್.<p>ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ನೇತೃತ್ವದ ವಿಭಾಗೀಯ ನ್ಯಾಯಪೀಠ (ಧಾರವಾಡ) ಪೊಲೀಸ್ ಇಲಾಖೆಯ ಕ್ರಮಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದೆ.</p>.<p>‘ಅಧಿಕಾರಿಗಳ ಸಣ್ಣಪುಟ್ಟ ತಪ್ಪುಗಳಿಂದಾಗಿ ಎದುರಾಗುವ ತಾಂತ್ರಿಕ ಕಾರಣಗಳ ಆಧಾರದಲ್ಲಿ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಒಳಗಾಗುವಂತಹ ಅರೋಪಿಗಳ ಬಿಡುಗಡೆಗೆ ಆದೇಶಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.ಗೂಂಡಾ ಕಾಯ್ದೆ.<p>ಮುಂಜಾಗ್ರತಾ ಕ್ರಮವಾಗಿ ಬಂಧನದ ಆದೇಶ ಹೊರಡಿಸುವುದಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ಮಾರ್ಗಸೂಚಿಗಳನ್ನು ಸರ್ಕಾರದ ಸಂಬಂಧಿಸಿದ ಇಲಾಖೆಗಳಿಗೆ ರವಾನಿಸುವಂತೆ ನ್ಯಾಯಪೀಠ ಇದೇ ವೇಳೆ ನಿರ್ದೆಶಿಸಿದೆ.</p>.<p>ಗೂಂಡಾ ಕಾಯ್ದೆಯಡಿ ಬಂಧಿಸುವಾಗ 13 ಅಂಶಗಳ ಮಾರ್ಗಸೂಚಿ ಪಾಲನೆ ಮಾಡುವಂತೆ ಹೈಕೋರ್ಟ್ 2019ರಲ್ಲಿ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>