ಬೆಂಗಳೂರು: ಅವಧೂತ ಪರಂಪರೆಯ ಗೌರಿಗದ್ದೆ ದತ್ತಾತ್ರೇಯ ಪೀಠದ ವಿನಯ್ ಗುರೂಜಿ ವಿರುದ್ಧ ಮಾಧ್ಯಮಗಳು ಯಾವುದೇ ಸುದ್ದಿ ಬಿತ್ತರಿಸದಂತೆ ಹೈಕೋರ್ಟ್ ನಿರ್ಬಂಧಿಸಿದೆ.
ಈ ಕುರಿತಂತೆ ಚಿಕ್ಕಮಗಳೂರಿನ ಉಪ್ಪಳ್ಳಿಯ ಚಂದ್ರಶೇಖರ ಭಾರತಿ ಎಂಬುವವರು ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ.