ವಿಚಾರಣೆ ವೇಳೆ ಹಾಜರಿದ್ದ ಪಾಲಿಕೆ ಮುಖ್ಯ ಆಯುಕ್ತ ಗೌರವ ಗುಪ್ತ, ‘ಹೈಕೋರ್ಟ್ ಆದೇಶದಂತೆ ತ್ವರಿತವಾಗಿ ನಗರದ ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚುತ್ತೇವೆ. ರಸ್ತೆ ಗುಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಸದ್ಯ ನಗರದ 182 ರಸ್ತೆಗಳನ್ನು ಪೈಥಾನ್ ಯಂತ್ರ ಬಳಸಿ ದುರಸ್ತಿ ಮಾಡಲಾಗುತ್ತಿದೆ. ಸಂಚಾರ ದಟ್ಟಣೆ ಹೆಚ್ಚಿರುವ ಕಡೆ ಪೈಥಾನ್ ಯಂತ್ರ ಬಳಸಲಾಗುತ್ತಿದೆ. ಹೊಸ ಟೆಂಡರ್ಗೆ ಯಾರೂ ಬಿಡ್ ಸಲ್ಲಿಸಿಲ್ಲ. ಹೀಗಾಗಿ, ಪೈಥಾನ್ ಯಂತ್ರಕ್ಕಾಗಿ ಮತ್ತೆ ಟೆಂಡರ್ ಕರೆಯುತ್ತೇವೆ’ ಎಂದು ತಿಳಿಸಿದರು.