ರಸ್ತೆ ಅಭಿವೃದ್ಧಿ, ಕೆಳ ಸೇತುವೆ (ಗ್ರೇಡ್ ಸಪರೇಟರ್), ಕೆರೆ ಅಭಿವೃದ್ಧಿ, ರಾಜಕಾಲುವೆ, ಉದ್ಯಾನ, ಘನತಾಜ್ಯ ನಿರ್ವಹಣೆ, ಬೀದಿ ದೀಪಗಳ ನಿರ್ವಹಣೆ, 75 ಕೊಳಚೆ ಪ್ರದೇಶಗಳ ಅಭಿವೃದ್ಧಿ, ಆಸ್ಪತ್ರೆ ಮತ್ತು ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ₹6 ಸಾವಿರ ಕೋಟಿ ಅನುದಾನ ಒದಗಿಸುವ ಬಗ್ಗೆ 75ನೇ ಸ್ವಾತಂತ್ರೋತ್ಸವದಲ್ಲಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದರು. 2022ರ ಜ. 6ರಂದು ಸಚಿವ ಸಂಪುಟದ ಅನುಮೋದನೆಯೂ ದೊರೆತಿತ್ತು.