ಬೆಂಗಳೂರು: ‘ಕೈಗಾರಿಕೋದ್ಯಮ ಮತ್ತು ಶಿಕ್ಷಣ ರಂಗಗಳ ಸಹಭಾಗಿತ್ವಕ್ಕೆ ಸಚಿವರ ಮಟ್ಟದ ಉನ್ನತ ಸಮಿತಿ ರಚಿಸಲಾಗುವುದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
ರಾಮಯ್ಯ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಶುಕ್ರವಾರ ಏರ್ಪಡಿಸಿದ್ದ ‘ಎಕ್ಸೀಡ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
‘ಉನ್ನತ ಸಮಿತಿಯಲ್ಲಿ ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ, ಸಣ್ಣ ಕೈಗಾರಿಕೆ, ಆರೋಗ್ಯ ಮತ್ತು ಕೌಶಲ ಅಭಿವೃದ್ಧಿ ಸಚಿವರು ಇರಲಿದ್ದಾರೆ’ ಎಂದು ಹೇಳಿದರು.
‘ಉದ್ಯಮಕ್ಕೆ ಬೇಕಾದಂತೆ ಮಾನವ ಸಂಪನ್ಮೂಲವನ್ನು ರಾಜ್ಯದಲ್ಲಿ ಸಜ್ಜುಗೊಳಿಸಲು ನಾವು ಸಿದ್ಧರಿದ್ದೇವೆ. ಇದರಿಂದ ರಾಜ್ಯದ ಯುವಜನರಿಗೂ ಉದ್ಯೋಗಾವಕಾಶಗಳು ಸಿಗಲಿವೆ’ ಎಂದು ಹೇಳಿದರು.