<p><strong>ಬೆಂಗಳೂರು</strong>: ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಈಸ್ಟ್ ಇಂಡಿಯಾ ಕಂಪನಿಯ ಮನಃಸ್ಥಿತಿ ಹೊಂದಿದೆ’ ಎಂದು ಛೀಮಾರಿ ಹಾಕಿರುವ ಹೈಕೋರ್ಟ್, ಭೂ ಸ್ವಾಧೀನದ ವ್ಯಾಜ್ಯವೊಂದರಲ್ಲಿ ಭೂ ಮಾಲೀಕರಿಗೆ ವರ್ಗಾವಣೆ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರ ನೀಡದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಜಯಮ್ಮ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಟಿಡಿಆರ್ ನೀಡಲು ಆಗುವುದಿಲ್ಲ’ ಎಂದು ಬಿಡಿಎ ನೀಡಿದ್ದ ಆದೇಶ<br />ವನ್ನು ರದ್ದುಗೊಳಿಸಿದೆ.</p>.<p>‘ಅರ್ಜಿದಾರರಿಗೆ ಟಿಡಿಆರ್ ಪ್ರಮಾಣ ಪತ್ರಗಳನ್ನು ವಿತರಿಸಬೇಕು. ಮೂರು ತಿಂಗಳಲ್ಲಿ ಹೈಕೋರ್ಟ್ ಆದೇಶ ಪಾಲನೆ ಬಗ್ಗೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಈ ಕುರಿತ ವರದಿ ನೀಡಬೇಕು’ ಎಂದು ನಿರ್ದೇಶಿಸಿದೆ.</p>.<p>‘ಒಂದು ವೇಳೆ ಕೋರ್ಟ್ ಆದೇಶ ಪಾಲನೆ ವಿಳಂಬವಾದರೆ ಬಿಡಿಎ ಆಯುಕ್ತರು ಪ್ರತಿದಿನಕ್ಕೆ<br />₹1 ಸಾವಿರವನ್ನು ಅರ್ಜಿದಾರರಿಗೆ ದಂಡವಾಗಿ ಪಾವತಿಸಬೇಕು ಮತ್ತು ಆ ದಂಡದ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಯಿಂದ ನಿಯಮಾನುಸಾರ ವಸೂಲು ಮಾಡಬೇಕು’ ಎಂದೂ ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಈಸ್ಟ್ ಇಂಡಿಯಾ ಕಂಪನಿಯ ಮನಃಸ್ಥಿತಿ ಹೊಂದಿದೆ’ ಎಂದು ಛೀಮಾರಿ ಹಾಕಿರುವ ಹೈಕೋರ್ಟ್, ಭೂ ಸ್ವಾಧೀನದ ವ್ಯಾಜ್ಯವೊಂದರಲ್ಲಿ ಭೂ ಮಾಲೀಕರಿಗೆ ವರ್ಗಾವಣೆ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರ ನೀಡದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಜಯಮ್ಮ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಟಿಡಿಆರ್ ನೀಡಲು ಆಗುವುದಿಲ್ಲ’ ಎಂದು ಬಿಡಿಎ ನೀಡಿದ್ದ ಆದೇಶ<br />ವನ್ನು ರದ್ದುಗೊಳಿಸಿದೆ.</p>.<p>‘ಅರ್ಜಿದಾರರಿಗೆ ಟಿಡಿಆರ್ ಪ್ರಮಾಣ ಪತ್ರಗಳನ್ನು ವಿತರಿಸಬೇಕು. ಮೂರು ತಿಂಗಳಲ್ಲಿ ಹೈಕೋರ್ಟ್ ಆದೇಶ ಪಾಲನೆ ಬಗ್ಗೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಈ ಕುರಿತ ವರದಿ ನೀಡಬೇಕು’ ಎಂದು ನಿರ್ದೇಶಿಸಿದೆ.</p>.<p>‘ಒಂದು ವೇಳೆ ಕೋರ್ಟ್ ಆದೇಶ ಪಾಲನೆ ವಿಳಂಬವಾದರೆ ಬಿಡಿಎ ಆಯುಕ್ತರು ಪ್ರತಿದಿನಕ್ಕೆ<br />₹1 ಸಾವಿರವನ್ನು ಅರ್ಜಿದಾರರಿಗೆ ದಂಡವಾಗಿ ಪಾವತಿಸಬೇಕು ಮತ್ತು ಆ ದಂಡದ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಯಿಂದ ನಿಯಮಾನುಸಾರ ವಸೂಲು ಮಾಡಬೇಕು’ ಎಂದೂ ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>