<p><strong>ಬೆಂಗಳೂರು:</strong>ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ, ಜೊತೆಗೆ ದೆಹಲಿಯಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ರೈತರು ಹೆದ್ದಾರಿ ತಡೆ ನಡೆಸುತ್ತಿದ್ದಾರೆ.</p>.<p>ಯಲಹಂಕದ ಪೊಲೀಸ್ ಸ್ಟೇಷನ್ ವೃತ್ತದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.10 ನಿಮಿಷ ಮಾತ್ರ ಪ್ರತಿಭಟನೆ ನಡೆಸಲು ಪೊಲೀಸರು ಅವಕಾಶ ನೀಡಿದರು.</p>.<p>ಇದನ್ನೂ ಓದಿ..<a href="https://www.prajavani.net/india-news/farmers-chakka-jam-today-3-hours-in-the-entire-country-against-farm-laws-rakesh-tikait-congress-bjp-802849.html" target="_blank"><strong>ದೇಶದಾದ್ಯಂತ ಚಕ್ಕಾ ಜಾಮ್ Live updates</strong></a></p>.<p>'ದೆಹಲಿ ರೈತರ ಹೋರಾಟಕ್ಕೆ ನಮ ಬೆಂಬಲ', ' ಕೃಷಿ ಕಾಯ್ದೆಯನ್ನು ರದ್ದು ಮಾಡದ ಕೇಂದ್ರಕ್ಕೆ ಧಿಕ್ಕಾರ' ಎಂದು ರೈತರು ಘೋಷಣೆ ಕೂಗಿದರು.ಶಾಂತಕುಮಾರ್ ಸೇರಿದಂತೆ ಕೆಲವು ರೈತರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಸದ್ಯ, ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.<br />ರೈತರು ಪ್ರವೇಶಿಸದಂತೆ ದೆಹಲಿಯಲ್ಲಿ ಮೊಳೆಗಳನ್ನು ಹಾಕಿರುವುದನ್ನು ವಿರೋಧಿಸಿ, ರೈತರು ಹೆದ್ದಾರಿಯಲ್ಲಿ ಸಾಂಕೇತಿಕವಾಗಿ ಮೊಳೆಗಳನ್ನು ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ, ಜೊತೆಗೆ ದೆಹಲಿಯಲ್ಲಿ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ರೈತರು ಹೆದ್ದಾರಿ ತಡೆ ನಡೆಸುತ್ತಿದ್ದಾರೆ.</p>.<p>ಯಲಹಂಕದ ಪೊಲೀಸ್ ಸ್ಟೇಷನ್ ವೃತ್ತದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.10 ನಿಮಿಷ ಮಾತ್ರ ಪ್ರತಿಭಟನೆ ನಡೆಸಲು ಪೊಲೀಸರು ಅವಕಾಶ ನೀಡಿದರು.</p>.<p>ಇದನ್ನೂ ಓದಿ..<a href="https://www.prajavani.net/india-news/farmers-chakka-jam-today-3-hours-in-the-entire-country-against-farm-laws-rakesh-tikait-congress-bjp-802849.html" target="_blank"><strong>ದೇಶದಾದ್ಯಂತ ಚಕ್ಕಾ ಜಾಮ್ Live updates</strong></a></p>.<p>'ದೆಹಲಿ ರೈತರ ಹೋರಾಟಕ್ಕೆ ನಮ ಬೆಂಬಲ', ' ಕೃಷಿ ಕಾಯ್ದೆಯನ್ನು ರದ್ದು ಮಾಡದ ಕೇಂದ್ರಕ್ಕೆ ಧಿಕ್ಕಾರ' ಎಂದು ರೈತರು ಘೋಷಣೆ ಕೂಗಿದರು.ಶಾಂತಕುಮಾರ್ ಸೇರಿದಂತೆ ಕೆಲವು ರೈತರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಸದ್ಯ, ದೇವನಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.<br />ರೈತರು ಪ್ರವೇಶಿಸದಂತೆ ದೆಹಲಿಯಲ್ಲಿ ಮೊಳೆಗಳನ್ನು ಹಾಕಿರುವುದನ್ನು ವಿರೋಧಿಸಿ, ರೈತರು ಹೆದ್ದಾರಿಯಲ್ಲಿ ಸಾಂಕೇತಿಕವಾಗಿ ಮೊಳೆಗಳನ್ನು ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>