<p><strong>ಬೆಂಗಳೂರು:</strong> ‘ಹಿಂದಿ’ ಕಟೌಟ್ ಕಿತ್ತು ಹಾಕಿದ ಪ್ರಕರಣದಲ್ಲಿ ಕನ್ನಡ ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರು, ‘ಹಿಂದಿ ಹೇರಿಕೆ ವಿರುದ್ಧ ನಮ್ಮ ಹೋರಾಟ ನಿರಂತರ’ ಎಂದು ಘೋಷಿಸಿದರು.</p>.<p>ನಗರದ ಪುರಭವನ ಎದುರು ಸೋಮವಾರ ಸಂಜೆ ಸೇರಿದ್ದ ಕಾರ್ಯಕರ್ತರು, ‘ಬಂಧಿತ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು. ಅವರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು’ ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.</p>.<p>‘ಕರ್ನಾಟಕದಲ್ಲಿ ನಾನಾ ರಾಜ್ಯಗಳ ಜನರಿದ್ದಾರೆ. ನಾವು ಯಾವತ್ತೂ ಅವರ ರಾಜ್ಯ ಯಾವುದೆಂದು ಕೇಳಿಲ್ಲ. ಎಲ್ಲ ಸೌಲಭ್ಯಗಳನ್ನೂ ಅವರಿಗೆ ಕೊಟ್ಟಿದ್ದೇವೆ. ಇಂಥ ನಾಡಿನಲ್ಲಿ ಕನ್ನಡ ಹೋರಾಟಗಾರರ ಮನೆಗಳಿಗೆ ಪೊಲೀಸರು ರಾತ್ರೋರಾತ್ರಿ ನುಗ್ಗಿ ಮನೆಯಲ್ಲೆಲ್ಲ ಹುಡುಕಾಡಿ ಎಳೆದೊಯ್ಯುವ ವ್ಯವಸ್ಥೆ ಬಂದಿದೆ. ಇಂಥ ದೌರ್ಜನ್ಯ ಏಕೆ ? ಕನ್ನಡ ಪರ ಹೋರಾಟ ಮಾಡುವುದೇ ತಪ್ಪಾ’ ಎಂದು ಕಾರ್ಯಕರ್ತರು ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿ ಕನ್ನಡದಲ್ಲೇ ನಾಮಫಲಕ ಇರಬೇಕೆಂಬ ನಿಯಮ ಇದೆ.ಜೈನ್ ಸಮುದಾಯದ ಕಟ್ಟಡದಲ್ಲಿದ್ದ ಹಿಂದಿ ಕಟೌಟ್ ಅನ್ನು ಮಾತ್ರ ಕಿತ್ತಿದ್ದಾರೆ. ಅಷ್ಟಕ್ಕೆ ಎಂಟು ಪ್ರಕರಣ ದಾಖಲಿಸಿ, ಅವರನ್ನು ಬಂಧಿಸುವುದು ಸರಿಯಲ್ಲ. ಹಿಂದಿ ಭಾಷೆಯಲ್ಲಿ ಕಟೌಟ್ ಹಾಕಿದ್ದವರ ವಿರುದ್ಧ ಪ್ರಕರಣವನ್ನು ಏಕೆ ದಾಖಲಿಸಿಲ್ಲ’ ಎಂದು ಹೇಳಿದರು.</p>.<p>ಧರ್ಮ, ವ್ಯಕ್ತಿ ವಿರುದ್ಧ ಹೋರಾಟವಲ್ಲ; ‘ಯಾವುದೇ ಧರ್ಮ, ರಾಜಕೀಯ ಪಕ್ಷ, ವ್ಯಕ್ತಿಯ ವಿರುದ್ಧ ನಮ್ಮ ಹೋರಾಟವಲ್ಲ. ಯಾವುದೇ ಸಂಸದ, ಸಚಿವನ ವಿರುದ್ಧವೂ ಅಲ್ಲ. ಹಿಂದಿ ಹೇರಿಕೆ ವಿರುದ್ಧ ಮಾತ್ರ ನಮ್ಮ ಹೋರಾಟ’ ಎಂದು ಕಾರ್ಯಕರ್ತರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹಿಂದಿ’ ಕಟೌಟ್ ಕಿತ್ತು ಹಾಕಿದ ಪ್ರಕರಣದಲ್ಲಿ ಕನ್ನಡ ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರು, ‘ಹಿಂದಿ ಹೇರಿಕೆ ವಿರುದ್ಧ ನಮ್ಮ ಹೋರಾಟ ನಿರಂತರ’ ಎಂದು ಘೋಷಿಸಿದರು.</p>.<p>ನಗರದ ಪುರಭವನ ಎದುರು ಸೋಮವಾರ ಸಂಜೆ ಸೇರಿದ್ದ ಕಾರ್ಯಕರ್ತರು, ‘ಬಂಧಿತ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಬೇಕು. ಅವರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು’ ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.</p>.<p>‘ಕರ್ನಾಟಕದಲ್ಲಿ ನಾನಾ ರಾಜ್ಯಗಳ ಜನರಿದ್ದಾರೆ. ನಾವು ಯಾವತ್ತೂ ಅವರ ರಾಜ್ಯ ಯಾವುದೆಂದು ಕೇಳಿಲ್ಲ. ಎಲ್ಲ ಸೌಲಭ್ಯಗಳನ್ನೂ ಅವರಿಗೆ ಕೊಟ್ಟಿದ್ದೇವೆ. ಇಂಥ ನಾಡಿನಲ್ಲಿ ಕನ್ನಡ ಹೋರಾಟಗಾರರ ಮನೆಗಳಿಗೆ ಪೊಲೀಸರು ರಾತ್ರೋರಾತ್ರಿ ನುಗ್ಗಿ ಮನೆಯಲ್ಲೆಲ್ಲ ಹುಡುಕಾಡಿ ಎಳೆದೊಯ್ಯುವ ವ್ಯವಸ್ಥೆ ಬಂದಿದೆ. ಇಂಥ ದೌರ್ಜನ್ಯ ಏಕೆ ? ಕನ್ನಡ ಪರ ಹೋರಾಟ ಮಾಡುವುದೇ ತಪ್ಪಾ’ ಎಂದು ಕಾರ್ಯಕರ್ತರು ಪ್ರಶ್ನಿಸಿದರು.</p>.<p>‘ರಾಜ್ಯದಲ್ಲಿ ಕನ್ನಡದಲ್ಲೇ ನಾಮಫಲಕ ಇರಬೇಕೆಂಬ ನಿಯಮ ಇದೆ.ಜೈನ್ ಸಮುದಾಯದ ಕಟ್ಟಡದಲ್ಲಿದ್ದ ಹಿಂದಿ ಕಟೌಟ್ ಅನ್ನು ಮಾತ್ರ ಕಿತ್ತಿದ್ದಾರೆ. ಅಷ್ಟಕ್ಕೆ ಎಂಟು ಪ್ರಕರಣ ದಾಖಲಿಸಿ, ಅವರನ್ನು ಬಂಧಿಸುವುದು ಸರಿಯಲ್ಲ. ಹಿಂದಿ ಭಾಷೆಯಲ್ಲಿ ಕಟೌಟ್ ಹಾಕಿದ್ದವರ ವಿರುದ್ಧ ಪ್ರಕರಣವನ್ನು ಏಕೆ ದಾಖಲಿಸಿಲ್ಲ’ ಎಂದು ಹೇಳಿದರು.</p>.<p>ಧರ್ಮ, ವ್ಯಕ್ತಿ ವಿರುದ್ಧ ಹೋರಾಟವಲ್ಲ; ‘ಯಾವುದೇ ಧರ್ಮ, ರಾಜಕೀಯ ಪಕ್ಷ, ವ್ಯಕ್ತಿಯ ವಿರುದ್ಧ ನಮ್ಮ ಹೋರಾಟವಲ್ಲ. ಯಾವುದೇ ಸಂಸದ, ಸಚಿವನ ವಿರುದ್ಧವೂ ಅಲ್ಲ. ಹಿಂದಿ ಹೇರಿಕೆ ವಿರುದ್ಧ ಮಾತ್ರ ನಮ್ಮ ಹೋರಾಟ’ ಎಂದು ಕಾರ್ಯಕರ್ತರು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>