<p><strong>ಬೆಂಗಳೂರು:</strong> ಲಾಲ್ಬಾಗ್ ಬಳಿಯ ಪೆಟ್ರೋಲ್ ಬಂಕೊಂದರಲ್ಲಿ ಹಾಕಿದ್ದ ‘ಹಿಂದಿ’ ಬ್ಯಾನರ್ಗೆ ‘ಕರುನಾಡ ಸೇವಕರು’ ಸಂಘಟನೆ ಕಾರ್ಯಕರ್ತರು ಸೋಮವಾರ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಉಜ್ವಲ 2.0’ ಯೋಜನೆ ಜಾಹೀರಾತಿಗಾಗಿ ಬ್ಯಾನರ್ ಹಾಕಲಾಗಿತ್ತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಫೋಟೊ ಬ್ಯಾನರ್ನಲ್ಲಿತ್ತು. ಅದರಲ್ಲಿ ಪ್ರತಿಯೊಂದು ಅಕ್ಷರವೂ ಹಿಂದಿ ಭಾಷೆಯಲ್ಲಿತ್ತು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬರು, ಬ್ಯಾನರ್ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.</p>.<p>ವಿಡಿಯೊ ಗಮನಿಸಿದ್ದ ಸಂಘಟನೆ ಅಧ್ಯಕ್ಷ ರೂಪೇಶ್ ರಾಜಣ್ಣ ಹಾಗೂ ಕಾರ್ಯಕರ್ತರು, ಸ್ಥಳಕ್ಕೆ ಹೋಗಿ ಬ್ಯಾನರ್ನಲ್ಲಿದ್ದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದರು. ‘ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು’ ಎಂದು ಬ್ಯಾನರ್ ಮೇಲೆ ಕನ್ನಡದಲ್ಲಿ ಬರೆದರು.</p>.<p>‘ರಾಜ್ಯಕ್ಕೆ ಸಂಬಂಧವಿಲ್ಲದ ಮುಖ್ಯಮಂತ್ರಿಯ ಭಾವಚಿತ್ರ ಇರುವ ಬ್ಯಾನರ್ ನಮಗೇಕೆ ? ಇಂಥ ಹಿಂದಿ ಹೇರಿಕೆಯನ್ನು ನಾವು ಸಹಿಸುವುದಿಲ್ಲ’ ಎಂದು ರೂಪೇಶ್ ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಾಲ್ಬಾಗ್ ಬಳಿಯ ಪೆಟ್ರೋಲ್ ಬಂಕೊಂದರಲ್ಲಿ ಹಾಕಿದ್ದ ‘ಹಿಂದಿ’ ಬ್ಯಾನರ್ಗೆ ‘ಕರುನಾಡ ಸೇವಕರು’ ಸಂಘಟನೆ ಕಾರ್ಯಕರ್ತರು ಸೋಮವಾರ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಉಜ್ವಲ 2.0’ ಯೋಜನೆ ಜಾಹೀರಾತಿಗಾಗಿ ಬ್ಯಾನರ್ ಹಾಕಲಾಗಿತ್ತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಫೋಟೊ ಬ್ಯಾನರ್ನಲ್ಲಿತ್ತು. ಅದರಲ್ಲಿ ಪ್ರತಿಯೊಂದು ಅಕ್ಷರವೂ ಹಿಂದಿ ಭಾಷೆಯಲ್ಲಿತ್ತು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವ್ಯಕ್ತಿಯೊಬ್ಬರು, ಬ್ಯಾನರ್ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.</p>.<p>ವಿಡಿಯೊ ಗಮನಿಸಿದ್ದ ಸಂಘಟನೆ ಅಧ್ಯಕ್ಷ ರೂಪೇಶ್ ರಾಜಣ್ಣ ಹಾಗೂ ಕಾರ್ಯಕರ್ತರು, ಸ್ಥಳಕ್ಕೆ ಹೋಗಿ ಬ್ಯಾನರ್ನಲ್ಲಿದ್ದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದರು. ‘ಕನ್ನಡಿಗರು ನಿಮ್ಮ ಗುಲಾಮರಲ್ಲ, ನಾವು ಸ್ವಾಭಿಮಾನಿಗಳು’ ಎಂದು ಬ್ಯಾನರ್ ಮೇಲೆ ಕನ್ನಡದಲ್ಲಿ ಬರೆದರು.</p>.<p>‘ರಾಜ್ಯಕ್ಕೆ ಸಂಬಂಧವಿಲ್ಲದ ಮುಖ್ಯಮಂತ್ರಿಯ ಭಾವಚಿತ್ರ ಇರುವ ಬ್ಯಾನರ್ ನಮಗೇಕೆ ? ಇಂಥ ಹಿಂದಿ ಹೇರಿಕೆಯನ್ನು ನಾವು ಸಹಿಸುವುದಿಲ್ಲ’ ಎಂದು ರೂಪೇಶ್ ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>