‘ಪುತ್ಥಳಿಯ ಹಿಂದೆ ಕಾಯಕವೇ ಕೈಲಾಸ ಎನ್ನುವುದನ್ನು ಕನ್ನಡ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಬರೆಯಲಾಗಿತ್ತು. ‘ಕಾಯಕ್ ಹಿ ಕೈಲಾಸ್’’ ಎಂಬ ಸಾಲು ತೆಗೆಯಬೇಕು, ಹಿಂದಿ ಹೇರಿಕೆಗೆ ಅವಕಾಶ ನೀಡಬಾರದು ಎಂದು ಬಿಬಿಎಂಪಿ ಆಯುಕ್ತರು ಮತ್ತು ಮೇಯರ್ ಅವರಿಗೆ ಮನವಿ ಮಾಡಿದ್ದೆವು. ಆದರೆ, ಸ್ಪಂದಿಸಲಿಲ್ಲ. ಅದಕ್ಕೆ ನಾವೇ ಆ ವಾಕ್ಯವನ್ನು ತೆಗೆಯಬೇಕಾಯಿತು’ ಎಂದು ಕರವೇ ಪದ್ಮನಾಭನಗರ ಕ್ಷೇತ್ರ ಘಟಕದ ಅಧ್ಯಕ್ಷ ಮನು ಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.