<p><strong>ಬೆಂಗಳೂರು:</strong> ನಗರದ ಚಂದ್ರಾ ಲೇಔಟ್ ಬಳಿಯ ಗಂಗೊಂಡನಹಳ್ಳಿ ದೇವಿ ಊರ ಹಬ್ಬವನ್ನು ಸ್ಥಳೀಯರು ಸಂಭ್ರಮದಿಂದ ಆಚರಿಸಿದರು. ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಟ್ಟಾಗಿ ಹಬ್ಬದಲ್ಲಿ ಪಾಲ್ಗೊಂಡು ಭಾವೈಕ್ಯತೆ ಸಾರಿದರು.</p>.<p>ಗಂಗೊಂಡನಹಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ದೇವಿ ಮೂರ್ತಿ ಮೆರವಣಿಗೆ ನಡೆಯಿತು. ಸ್ಥಳೀಯ ಮಸೀದಿ ಎದುರು ದೇವಿಮೂರ್ತಿ ಬರುತ್ತಿದ್ದಂತೆ, ಮುಸ್ಲಿಂ ಸಮುದಾಯದ ಜನರು ಭಕ್ತಿಯಿಂದ ಬರಮಾಡಿಕೊಂಡರು.</p>.<p>ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಜ್ಯೂಸ್ ಕೊಟ್ಟು ಉಪಚರಿಸಿದರು. ತಾವೂ ದೇವಿ ಮೂರ್ತಿಗೆ ನಮಿಸಿ, ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು.ಮೆರವಣಿಗೆಯಲ್ಲಿದ್ದ ಹಿಂದೂಗಳನ್ನು ತಬ್ಬಿಕೊಂಡು ಹಬ್ಬದ ಶುಭಾಶಯ ಕೋರಿದರು. ಎರಡೂ ಸಮುದಾಯದ ಜನ ಪರಸ್ಪರ ಕೈ ಕೈ ಹಿಡಿದು, 'ನಾವೆಲ್ಲರೂ ಒಂದೇ' ಎಂಬ ಸಂದೇಶ ಸಾರಿದರು.</p>.<p>ನಂತರ, ದೇವಿ ಮೂರ್ತಿ ಹಾಗೂ ಸ್ನೇಹಿತರ ಜೊತೆ ಫೋಟೊ ಕ್ಲಿಕ್ಕಿಸಿಕೊಂಡರು. ಕೆಲ ಮುಸ್ಲಿಂರು, ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.</p>.<p>ಮುಂಜಾಗ್ರತಾ ಕ್ರಮವಾಗಿ ಮಸೀದಿ ಎದುರು ಪೊಲೀಸರು ಭದ್ರತೆ ಕೈಗೊಂಡಿದ್ದರು. ಆದರೆ, ಎರಡು ಸಮುದಾಯದವರ ಸೌಹಾರ್ದತೆ ಕಂಡು ಪೊಲೀಸರೂ ಖುಷಿಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಚಂದ್ರಾ ಲೇಔಟ್ ಬಳಿಯ ಗಂಗೊಂಡನಹಳ್ಳಿ ದೇವಿ ಊರ ಹಬ್ಬವನ್ನು ಸ್ಥಳೀಯರು ಸಂಭ್ರಮದಿಂದ ಆಚರಿಸಿದರು. ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಟ್ಟಾಗಿ ಹಬ್ಬದಲ್ಲಿ ಪಾಲ್ಗೊಂಡು ಭಾವೈಕ್ಯತೆ ಸಾರಿದರು.</p>.<p>ಗಂಗೊಂಡನಹಳ್ಳಿಯಲ್ಲಿ ಮಂಗಳವಾರ ಬೆಳಿಗ್ಗೆ ದೇವಿ ಮೂರ್ತಿ ಮೆರವಣಿಗೆ ನಡೆಯಿತು. ಸ್ಥಳೀಯ ಮಸೀದಿ ಎದುರು ದೇವಿಮೂರ್ತಿ ಬರುತ್ತಿದ್ದಂತೆ, ಮುಸ್ಲಿಂ ಸಮುದಾಯದ ಜನರು ಭಕ್ತಿಯಿಂದ ಬರಮಾಡಿಕೊಂಡರು.</p>.<p>ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಜ್ಯೂಸ್ ಕೊಟ್ಟು ಉಪಚರಿಸಿದರು. ತಾವೂ ದೇವಿ ಮೂರ್ತಿಗೆ ನಮಿಸಿ, ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು.ಮೆರವಣಿಗೆಯಲ್ಲಿದ್ದ ಹಿಂದೂಗಳನ್ನು ತಬ್ಬಿಕೊಂಡು ಹಬ್ಬದ ಶುಭಾಶಯ ಕೋರಿದರು. ಎರಡೂ ಸಮುದಾಯದ ಜನ ಪರಸ್ಪರ ಕೈ ಕೈ ಹಿಡಿದು, 'ನಾವೆಲ್ಲರೂ ಒಂದೇ' ಎಂಬ ಸಂದೇಶ ಸಾರಿದರು.</p>.<p>ನಂತರ, ದೇವಿ ಮೂರ್ತಿ ಹಾಗೂ ಸ್ನೇಹಿತರ ಜೊತೆ ಫೋಟೊ ಕ್ಲಿಕ್ಕಿಸಿಕೊಂಡರು. ಕೆಲ ಮುಸ್ಲಿಂರು, ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.</p>.<p>ಮುಂಜಾಗ್ರತಾ ಕ್ರಮವಾಗಿ ಮಸೀದಿ ಎದುರು ಪೊಲೀಸರು ಭದ್ರತೆ ಕೈಗೊಂಡಿದ್ದರು. ಆದರೆ, ಎರಡು ಸಮುದಾಯದವರ ಸೌಹಾರ್ದತೆ ಕಂಡು ಪೊಲೀಸರೂ ಖುಷಿಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>