ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಸಿಹ್ ಫೌಂಡೇಷನ್ ಅಧ್ಯಕ್ಷ ಮೌಲಾನಾ ಸಯ್ಯದ್ ಶಬ್ಬೀರ್ ಅಹ್ಮದ್ ನದ್ವಿ, ‘ಜನರು ಸಾಕಷ್ಟು ಸಮಸ್ಯೆಗಳಿಂದ ಪರದಾಡುತ್ತಿದ್ದಾರೆ. ಅವುಗಳನ್ನು ಪರಿಹರಿಸುವುದನ್ನು ಬಿಟ್ಟು ಕೆಲವರು ಉತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ಬಹಿಷ್ಕಾರ, ಹಲಾಲ್ ವಿಷಯಗಳ ಮೂಲಕ ಸಾಮರಸ್ಯ ಹಾಳು ಮಾಡಲು ಯತ್ನಿಸಿದ್ದಾರೆ’ ಎಂದು ದೂರಿದರು.