<p><strong>ಬೆಂಗಳೂರು</strong>: ಪಶ್ಚಿಮ ಬಂಗಾಳದ ವಿರಾಸತ್ ಆರ್ಟ್, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ‘ಹಿಂದುಸ್ತಾನ್ ಫೈಲ್ಸ್: 1757–1950’ ಕಲಾಕೃತಿಗಳ ಪ್ರದರ್ಶನಕ್ಕೆ ಶುಕ್ರವಾರ ಚಿತ್ರಕಲಾ ಪರಿಷತ್ತಿನಲ್ಲಿ ಚಾಲನೆ ನೀಡಲಾಗಿದೆ.</p>.<p>ಭಾರತದ ಶ್ರೀಮಂತ ಇತಿಹಾಸ ಮತ್ತು ಪರಂಪರೆಯನ್ನು ತಿಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಲಾಪ್ರದರ್ಶನವು ನ.23ರವರೆಗೆ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 6ರವರೆಗೆ ಸಾರ್ವಜನಿಕ ವೀಕ್ಷಣೆಗೆ ಲಭ್ಯವಿದೆ.</p>.<p>1757ರಲ್ಲಿ ಭಾರತದಲ್ಲಿ ಬ್ರಿಟಿಷರ ಆಡಳಿತ ಆರಂಭವಾದ ವರ್ಷ. ಅಲ್ಲಿಂದ 1950ರವರೆಗಿನ ಚಿತ್ರಣವನ್ನು ಕಟ್ಟಿಕೊಡುವ ಅಪರೂಪದ ಚಿತ್ರ, ಛಾಯಾಚಿತ್ರ, ಪತ್ರ, ಆಡಳಿತದ ದಾಖಲೆಗಳು, ಇತಿಹಾಸದ ವಸ್ತುಗಳ ಸಂಗ್ರಹವನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. 250ಕ್ಕೂ ಅಧಿಕ ಕಲಾಕೃತಿಗಳು ಪರಿಷತ್ತಿನ ನಾಲ್ಕು ಗ್ಯಾಲರಿಗಳಲ್ಲಿ ಪ್ರದರ್ಶನಗೊಳ್ಳುತ್ತಿವೆ.</p>.<p>ನ.17ರಂದು ಬೆಳಿಗ್ಗೆ 9.30ಕ್ಕೆ ವಿಚಾರ ಸಂಕಿರಣ ನಡೆಯಲಿದೆ. ಕಲಾವಿದರಾದ ಮೀರಾ ಚಕ್ರವರ್ತಿ, ಮನೋಹರ್ ಯಡವಟ್ಟಿ, ನಾನಕ್ ಗಂಗೋಪಾಧ್ಯಾಯ್ ಭಾಗವಹಿಸಲಿದ್ದಾರೆ.</p>.<p>ಕರ್ನಾಟಕ ಚಿತ್ರಕಲಾ ಪರಿಷತ್ನ ಉಪಾಧ್ಯಕ್ಷ ಟಿ. ಪ್ರಭಾಕರ್ ಚಾಲನೆ ನೀಡಿದರು. ವಿರಾಸತ್ ಆರ್ಟ್ ನಿರ್ದೇಶಕ ಗಣೇಶ್ ಪ್ರತಾಪ್ ಸಿಂಗ್, ಪ್ರದರ್ಶನದ ಕ್ಯುರೇಟರ್ ಬಸು ಆಚಾರ್ಯ, ಕಾರ್ಯಕ್ರಮ ನಿರ್ದೇಶಕ ಎಲೋರಾ ಸಿಂಗ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪಶ್ಚಿಮ ಬಂಗಾಳದ ವಿರಾಸತ್ ಆರ್ಟ್, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ‘ಹಿಂದುಸ್ತಾನ್ ಫೈಲ್ಸ್: 1757–1950’ ಕಲಾಕೃತಿಗಳ ಪ್ರದರ್ಶನಕ್ಕೆ ಶುಕ್ರವಾರ ಚಿತ್ರಕಲಾ ಪರಿಷತ್ತಿನಲ್ಲಿ ಚಾಲನೆ ನೀಡಲಾಗಿದೆ.</p>.<p>ಭಾರತದ ಶ್ರೀಮಂತ ಇತಿಹಾಸ ಮತ್ತು ಪರಂಪರೆಯನ್ನು ತಿಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಲಾಪ್ರದರ್ಶನವು ನ.23ರವರೆಗೆ ಪ್ರತಿದಿನ ಬೆಳಿಗ್ಗೆ 11ರಿಂದ ಸಂಜೆ 6ರವರೆಗೆ ಸಾರ್ವಜನಿಕ ವೀಕ್ಷಣೆಗೆ ಲಭ್ಯವಿದೆ.</p>.<p>1757ರಲ್ಲಿ ಭಾರತದಲ್ಲಿ ಬ್ರಿಟಿಷರ ಆಡಳಿತ ಆರಂಭವಾದ ವರ್ಷ. ಅಲ್ಲಿಂದ 1950ರವರೆಗಿನ ಚಿತ್ರಣವನ್ನು ಕಟ್ಟಿಕೊಡುವ ಅಪರೂಪದ ಚಿತ್ರ, ಛಾಯಾಚಿತ್ರ, ಪತ್ರ, ಆಡಳಿತದ ದಾಖಲೆಗಳು, ಇತಿಹಾಸದ ವಸ್ತುಗಳ ಸಂಗ್ರಹವನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. 250ಕ್ಕೂ ಅಧಿಕ ಕಲಾಕೃತಿಗಳು ಪರಿಷತ್ತಿನ ನಾಲ್ಕು ಗ್ಯಾಲರಿಗಳಲ್ಲಿ ಪ್ರದರ್ಶನಗೊಳ್ಳುತ್ತಿವೆ.</p>.<p>ನ.17ರಂದು ಬೆಳಿಗ್ಗೆ 9.30ಕ್ಕೆ ವಿಚಾರ ಸಂಕಿರಣ ನಡೆಯಲಿದೆ. ಕಲಾವಿದರಾದ ಮೀರಾ ಚಕ್ರವರ್ತಿ, ಮನೋಹರ್ ಯಡವಟ್ಟಿ, ನಾನಕ್ ಗಂಗೋಪಾಧ್ಯಾಯ್ ಭಾಗವಹಿಸಲಿದ್ದಾರೆ.</p>.<p>ಕರ್ನಾಟಕ ಚಿತ್ರಕಲಾ ಪರಿಷತ್ನ ಉಪಾಧ್ಯಕ್ಷ ಟಿ. ಪ್ರಭಾಕರ್ ಚಾಲನೆ ನೀಡಿದರು. ವಿರಾಸತ್ ಆರ್ಟ್ ನಿರ್ದೇಶಕ ಗಣೇಶ್ ಪ್ರತಾಪ್ ಸಿಂಗ್, ಪ್ರದರ್ಶನದ ಕ್ಯುರೇಟರ್ ಬಸು ಆಚಾರ್ಯ, ಕಾರ್ಯಕ್ರಮ ನಿರ್ದೇಶಕ ಎಲೋರಾ ಸಿಂಗ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>